BREAKING NEWS

ಮಣಿಪುರ ಪರಿಸ್ಥಿತಿಯ ಚರ್ಚೆಗೆ ವಿಪಕ್ಷಗಳ ಪಟ್ಟು: ಕಲಾಪ ಸೋಮವಾರಕ್ಕೆ ಮುಂದೂಡಿಕೆ

ನವದೆಹಲಿ: ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಇಂದು ಸಹ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ, ಗದ್ದಲ ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು.

ಲೋಕಸಭೆ ಕಲಾಪ ಸಮಾವೇಶಗೊಳ್ಳುತ್ತಿದ್ದಂತೆಯೇ, ಸ್ಪೀಕರ್ ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಂಡರು ಆದರೆ ವಿರೋಧ ಪಕ್ಷದ ಸದಸ್ಯರು ತಮ್ಮ ಬೇಡಿಕೆ ಬೆಂಬಲಿಸಿ ಘೋಷಣೆ ಮೊಳಗಿಸಿದರು. ಸ್ಪೀಕರ್ ಓಂ ಬಿರ್ಲಾ ಅವರು ಅಂಗೀಕರಿಸಿದ ಅವಿಶ್ವಾಸ ನಿರ್ಣಯದ ಮೇಲೆ ತಕ್ಷಣ ಚರ್ಚೆಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಒತ್ತಾಯಿಸಿದರು.

1978 ರ ಉದಾಹರಣೆಯನ್ನು ಉಲ್ಲೇಖಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು, ಅವಿಶ್ವಾಸ ನಿರ್ಣಯವನ್ನು ಚರ್ಚೆಗೆ ಅಂಗೀಕರಿಸಿದ ದಿನವೇ ಸದನವು ಅದರ ಮೇಲೆ ಚರ್ಚೆಯನ್ನು ಕೈಗೆತ್ತಿಕೊಂಡಿತು ಎಂದು ಹೇಳುವ ಮೂಲಕ ಚರ್ಚೆಗೆ ಆಗ್ರಹಿಸಿದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ  ಮಾತನಾಡಿ, ಸಭಾಧ್ಯಕ್ಷರು ನಿರ್ಧರಿಸಿದ ದಿನ ಮತ್ತು ಸಮಯದ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಿದ್ದು, ನಿಯಮಾವಳಿ ಪ್ರಕಾರ 10 ದಿನಗಳ ಗಡುವನ್ನು ನೀಡಲಾಗುತ್ತದೆ ಎಂದು ಹೇಳಿದರು. ಗದ್ದಲದ ನಡುವೆಯೇ ಸ್ಪೀಕರ್ ಸದನವನ್ನು ಮಧ್ಯಾಹ್ನ 12 ಗಂಟೆಗೆ ತದನಂತರ ದಿನದ ಮಟ್ಟಿಗೆ ಮುಂದೂಡಿದರು. ಬಿರ್ಲಾ ಅವರು ಬುಧವಾರ ವಿರೋಧ ಪಕ್ಷದ ಸದಸ್ಯರ ಬೆಂಬಲದೊಂದಿಗೆ ಅವಿಶ್ವಾಸ ನಿರ್ಣಯವನ್ನು ಚರ್ಚೆಗೆ ಅಂಗೀಕರಿಸಿದ್ದರು.

ಮಣಿಪುರಕ್ಕೆ ಸಂಬಂಧಿಸಿದ ತಮ್ಮ ಬೇಡಿಕೆಗಳನ್ನು ಪ್ರತಿಪಕ್ಷಗಳ ಸದಸ್ಯರು ಪ್ರಸ್ತಾಪಿಸಿದ ನಂತರ ರಾಜ್ಯಸಭೆಯನ್ನು ದಿನಕ್ಕೆ ಮುಂದೂಡಲಾಯಿತು.

ರಾಜ್ಯಸಭೆಯಲ್ಲೂ, ಟಿಎಂಸಿ ನಾಯಕ ಡೆರಿಕ್ ಒಬ್ರಿಯನ್ ಅವರೊಂದಿಗಿನ ವಾಗ್ವಾದದ ನಂತರ ಸಭಾಪತಿ ಜಗದೀಪ್ ಧಂಖರ್ ಶುಕ್ರವಾರ ಸದನದ ಕಲಾಪವನ್ನು ದಿಢೀರ್‌ಗೆ ಮುಂದೂಡಿದರು. ಮಣಿಪುರ ಪರಿಸ್ಥಿತಿಯನ್ನು ಚರ್ಚಿಸಲು ನಿಯಮ 267 ರ ಅಡಿಯಲ್ಲಿ ವಿರೋಧ ಪಕ್ಷದ ಸದಸ್ಯರು ನೀಡಿದ ನೋಟಿಸ್‌ಗಳನ್ನು ಸ್ವೀಕರಿಸದ ವಿಷಯದ ಬಗ್ಗೆ ಟಿಎಂಸಿ ನಾಯಕ ಅಡ್ಡಿಪಡಿಸಿದ ನಂತರ ಧಂಖರ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ಮಣಿಪುರದ ಪರಿಸ್ಥಿತಿಯ ಬಗ್ಗೆ ವಿಸ್ತೃತ ಚರ್ಚೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಾಗಿ ವಿರೋಧ ಪಕ್ಷಗಳು ಸಂಸತ್ತಿನ ಉಭಯ ಸದನಗಳ್ಲಲಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಎಂಟು ದಿನಗಳಿಂದಲೂ ಸುಗಮ ಕಲಾಪ ನಡೆಯದೇ ವ್ಯರ್ಥವಾಗುತ್ತಿದೆ.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

32 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

37 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

46 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago