BREAKING NEWS

ಮಣಿಪುರ ಪರಿಸ್ಥಿತಿಯ ಚರ್ಚೆಗೆ ವಿಪಕ್ಷಗಳ ಪಟ್ಟು: ಕಲಾಪ ಸೋಮವಾರಕ್ಕೆ ಮುಂದೂಡಿಕೆ

ನವದೆಹಲಿ: ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಇಂದು ಸಹ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ, ಗದ್ದಲ ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು.

ಲೋಕಸಭೆ ಕಲಾಪ ಸಮಾವೇಶಗೊಳ್ಳುತ್ತಿದ್ದಂತೆಯೇ, ಸ್ಪೀಕರ್ ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಂಡರು ಆದರೆ ವಿರೋಧ ಪಕ್ಷದ ಸದಸ್ಯರು ತಮ್ಮ ಬೇಡಿಕೆ ಬೆಂಬಲಿಸಿ ಘೋಷಣೆ ಮೊಳಗಿಸಿದರು. ಸ್ಪೀಕರ್ ಓಂ ಬಿರ್ಲಾ ಅವರು ಅಂಗೀಕರಿಸಿದ ಅವಿಶ್ವಾಸ ನಿರ್ಣಯದ ಮೇಲೆ ತಕ್ಷಣ ಚರ್ಚೆಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಒತ್ತಾಯಿಸಿದರು.

1978 ರ ಉದಾಹರಣೆಯನ್ನು ಉಲ್ಲೇಖಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು, ಅವಿಶ್ವಾಸ ನಿರ್ಣಯವನ್ನು ಚರ್ಚೆಗೆ ಅಂಗೀಕರಿಸಿದ ದಿನವೇ ಸದನವು ಅದರ ಮೇಲೆ ಚರ್ಚೆಯನ್ನು ಕೈಗೆತ್ತಿಕೊಂಡಿತು ಎಂದು ಹೇಳುವ ಮೂಲಕ ಚರ್ಚೆಗೆ ಆಗ್ರಹಿಸಿದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ  ಮಾತನಾಡಿ, ಸಭಾಧ್ಯಕ್ಷರು ನಿರ್ಧರಿಸಿದ ದಿನ ಮತ್ತು ಸಮಯದ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಿದ್ದು, ನಿಯಮಾವಳಿ ಪ್ರಕಾರ 10 ದಿನಗಳ ಗಡುವನ್ನು ನೀಡಲಾಗುತ್ತದೆ ಎಂದು ಹೇಳಿದರು. ಗದ್ದಲದ ನಡುವೆಯೇ ಸ್ಪೀಕರ್ ಸದನವನ್ನು ಮಧ್ಯಾಹ್ನ 12 ಗಂಟೆಗೆ ತದನಂತರ ದಿನದ ಮಟ್ಟಿಗೆ ಮುಂದೂಡಿದರು. ಬಿರ್ಲಾ ಅವರು ಬುಧವಾರ ವಿರೋಧ ಪಕ್ಷದ ಸದಸ್ಯರ ಬೆಂಬಲದೊಂದಿಗೆ ಅವಿಶ್ವಾಸ ನಿರ್ಣಯವನ್ನು ಚರ್ಚೆಗೆ ಅಂಗೀಕರಿಸಿದ್ದರು.

ಮಣಿಪುರಕ್ಕೆ ಸಂಬಂಧಿಸಿದ ತಮ್ಮ ಬೇಡಿಕೆಗಳನ್ನು ಪ್ರತಿಪಕ್ಷಗಳ ಸದಸ್ಯರು ಪ್ರಸ್ತಾಪಿಸಿದ ನಂತರ ರಾಜ್ಯಸಭೆಯನ್ನು ದಿನಕ್ಕೆ ಮುಂದೂಡಲಾಯಿತು.

ರಾಜ್ಯಸಭೆಯಲ್ಲೂ, ಟಿಎಂಸಿ ನಾಯಕ ಡೆರಿಕ್ ಒಬ್ರಿಯನ್ ಅವರೊಂದಿಗಿನ ವಾಗ್ವಾದದ ನಂತರ ಸಭಾಪತಿ ಜಗದೀಪ್ ಧಂಖರ್ ಶುಕ್ರವಾರ ಸದನದ ಕಲಾಪವನ್ನು ದಿಢೀರ್‌ಗೆ ಮುಂದೂಡಿದರು. ಮಣಿಪುರ ಪರಿಸ್ಥಿತಿಯನ್ನು ಚರ್ಚಿಸಲು ನಿಯಮ 267 ರ ಅಡಿಯಲ್ಲಿ ವಿರೋಧ ಪಕ್ಷದ ಸದಸ್ಯರು ನೀಡಿದ ನೋಟಿಸ್‌ಗಳನ್ನು ಸ್ವೀಕರಿಸದ ವಿಷಯದ ಬಗ್ಗೆ ಟಿಎಂಸಿ ನಾಯಕ ಅಡ್ಡಿಪಡಿಸಿದ ನಂತರ ಧಂಖರ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ಮಣಿಪುರದ ಪರಿಸ್ಥಿತಿಯ ಬಗ್ಗೆ ವಿಸ್ತೃತ ಚರ್ಚೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಾಗಿ ವಿರೋಧ ಪಕ್ಷಗಳು ಸಂಸತ್ತಿನ ಉಭಯ ಸದನಗಳ್ಲಲಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಎಂಟು ದಿನಗಳಿಂದಲೂ ಸುಗಮ ಕಲಾಪ ನಡೆಯದೇ ವ್ಯರ್ಥವಾಗುತ್ತಿದೆ.

andolanait

Recent Posts

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

10 mins ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

22 mins ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago