BREAKING NEWS

ವಿಪಕ್ಷಗಳ ಸಭೆ: ‘ಅಸಮಾಧಾನ’ ವರದಿ ತಿರಸ್ಕರಿಸಿದ ನಿತೀಶ್ ಕುಮಾರ್

ಪಾಟ್ನಾ: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ತಮಗೆ ಅಸಮಾಧಾನವಿದೆ ಎಂಬ ಮಾಧ್ಯಮಗಳ ವರದಿಯನ್ನು ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ತಳ್ಳಿ ಹಾಕಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಗೆ ಗೈರಾಗಿದ್ದ ವಿಚಾರವಾಗಿ ಮಾಧ್ಯಮಗಳು ತಪ್ಪಾಗಿ ಅರ್ಥೈಸಿಕೊಂಡಿವೆ. ನನಗೆ ಯಾವುದೇ ರೀತಿಯ ಅಸಮಾಧಾನವಿಲ್ಲ. ನಾವೆಲ್ಲರೂ ಒಗ್ಗಾಟ್ಟಾಗಿದ್ದೇವೆ.. ಒಗ್ಗೂಡಿ ಬಿಜೆಪಿಯನ್ನು ಎದುರಿಸುತ್ತೇವೆ. ರಾಜ್ ಗಿರ್ ನಲ್ಲಿ ಕಾರ್ಯಕ್ರಮ ಇದ್ದಿದ್ದರಿಂದ ನಾನು ಸುದ್ದಿಗೋಷ್ಠಿಗೆ ಗೈರಾಗಿದ್ದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿದ್ದ ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ‘ಲಾಲನ್’ ಅವರು ವಿರೋಧ ಪಕ್ಷದ ಸಭೆಯಲ್ಲಿ ವಿಷಯಗಳು ನಡೆದ ರೀತಿಯ ಬಗ್ಗೆ ನಿತೀಶ್ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದರು.  ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ‘ದುಷ್ಪ್ರಚಾರ್’ (ಕ್ಯಾನಾರ್ಡ್) ಎಂದು ಬಣ್ಣಿಸಿದರು.

ದೇಶದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಯ ಕಡೆಯಿಂದ ಇದೆಲ್ಲವೂ ದುಷ್ಪ್ರಚಾರ ಮತ್ತು ವದಂತಿಗಳಷ್ಟೇ. ಇಂಡಿಯಾ ಎಂಬ ಹೆಸರು ಪ್ರತಿಪಕ್ಷ ಸಭೆಯಲ್ಲಿ ಹಾಜರಿದ್ದ ಎಲ್ಲಾ ನಾಯಕರಿಂದ ಅನುಮೋದನೆಯ ಮುದ್ರೆಯನ್ನು ಹೊಂದಿತ್ತು ಎಂದು ಲಾಲನ್ ಹೇಳಿದರು.

ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ಮಾಡಲಾಗುತ್ತದೆ ಎಂಬ ಊಹಾಪೋಹಗಳ ಬಗ್ಗೆ ಮಾತನಾಡಿದ ಜೆಡಿಯು ಮುಖ್ಯಸ್ಥರು, “ಇದು ನಿನ್ನೆಯ ಸಭೆಯ ಅಜೆಂಡಾದಲ್ಲಿ ಇರಲಿಲ್ಲ, ಮುಂಬೈನಲ್ಲಿ ಮುಂದಿನ ಸಭೆ ಯಾವಾಗ ನಡೆಯಲಿದೆ ಎಂದು ಯೋಚಿಸಬಹುದು” ಎಂದು ಹೇಳಿದರು.

ನಿತೀಶ್ ಕುಮಾರ್ ಅವರು ‘ಇಂಡಿಯಾ’ ಎಂಬ ಸಂಕ್ಷಿಪ್ತ ರೂಪದಿಂದ ಅತೃಪ್ತರಾಗಿದ್ದು ಹೊಸ ಒಕ್ಕೂಟದ ಸಂಚಾಲಕರನ್ನಾಗಿ ಮಾಡದಿರುವ ಬಗ್ಗೆ ಬೇಸರಗೊಂಡಿದ್ದಾರೆ ಎಂದು ವರದಿ ಮಾಡಲಾಗಿತ್ತು.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

6 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

7 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

9 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

10 hours ago