BREAKING NEWS

ನ್ಯಾ.ಸದಾಶಿವ ವರದಿ ಕೇಂದ್ರಕ್ಕೆ ಶಿಫಾರಸು ನಿರ್ಧಾರಕ್ಕೆ ವಿರೋಧ: ಚುನಾವಣೆ ಬಹಿಷ್ಕಾರಕ್ಕೆ ಸಮುದಾಯ ಸಿದ್ದತೆ

ಶಿವಮೊಗ್ಗ: ನ್ಯಾಯಮೂರ್ತಿ ಎ.ಜೆ. ಸದಾಶಿವ ಅಯೋಗದ ಶಿಫಾರಸ್ಸನ್ನು ಕೇಂದ್ರಕ್ಕೆ ಕಳುಹಿಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಶಿಕಾರಿಪುರ ತಾಲ್ಲೂಕಿನ ಹಲವು ತಾಂಡಾಗಳ ಎದುರು ವಿಧಾನಸಭೆ ಚುನಾವಣೆ ಬಹಿಷ್ಕಾರ ಕುರಿತಾದ ಫ್ಲೆಕ್ಸ್‌ಗಳು ಕಾಣಿಸುತ್ತಿವೆ.

ತಾಲ್ಲೂಕು ಕೇಂದ್ರ ಶಿಕಾರಿಪುರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲು ಬಂಜಾರ ಸಮುದಾಯ ಮುಂದಾಗಿದೆ.

ತಾಲ್ಲೂಕಿನ ಕುಸ್ಕೂರು ತಾಂಡಾ, ಬಿಳಕಿ, ಇಟ್ಟಿಗೆಹಳ್ಳಿ ಬಳ್ಳೂರು ತಾಂಡಾಗಳ ಪ್ರವೇಶ ದ್ವಾರದಲ್ಲಿ ‘ಹಮಾರೋ ತಾಂಡೊ ಹಮಾರೋ ರಾಜ್’ ಹೆಸರಿನ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ತಾಂಡಾಕ್ಕೆ ರಾಜಕೀಯ ಪಕ್ಷಗಳ ಮುಖಂಡರ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಸಾಮಾಜಿಕ ಜಾಲತಾಣದಲ್ಲೂ ಪೋಸ್ಟರ್‌ ಹರಿಬಿಡಲಾಗಿದೆ.

ಮುಖಂಡರಿಗೂ ಬಹಿಷ್ಕಾರದ ಭೀತಿ: ‘ಪ್ರತಿಭಟನೆಗೆ ಪೂರ್ವಭಾವಿಯಾಗಿ ಶಿಕಾರಿಪುರದಲ್ಲಿ ಭಾನುವಾರ ನಡೆದ ಸಭೆಗೆ ಹಾಲಿ, ಮಾಜಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು. ಸಮಾಜದ ಮುಖಂಡರು ಯಾರು ಬರುವುದಿಲ್ಲವೋ ಅವರು ಚುನಾವಣೆ ಪ್ರಚಾರಕ್ಕೆ ತಾಂಡಾಗಳಿಗೆ ಬಿಟ್ಟುಕೊಳ್ಳಬಾರದು ಎಂಬ ನಿರ್ಧಾರ ಕೈಗೊಳ್ಳಲಾಗಿತ್ತು. ನೀವು ಬರುತ್ತೀರೊ, ಇಲ್ಲವೋ ಸ್ಪಷ್ಟಪಡಿಸಿ ಎಂದು ತಾಕೀತು ಮಾಡಿದ್ದರಿಂದ ಬಹುತೇಕರು ಪಾಲ್ಗೊಂಡಿದ್ದೆವು’ ಎಂದು ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ, ಸಾಲೂರಿನ ಜಯಾನಾಯ್ಕ ಹೇಳಿದರು.

‘ನಮಗೆ ಅನ್ಯಾಯ ಆಗಲಿದೆ. ಚುನಾವಣೆಯಲ್ಲಿ ಮತ ಹಾಕುವುದು ಬೇಡ. ಬಹಿಷ್ಕರಿಸೋಣ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ನಾವು ಬಿಜೆಪಿಯಲ್ಲಿ ಇದ್ದವರು. ಪಕ್ಷದ ಪರ ಮಾತಾಡಲು ಹೋದರೆ ಗಲಾಟೆ ಆಗುತ್ತಿತ್ತು. ಹೀಗಾಗಿ ಏನೂ ಮಾತಾಡಲಾಗಲಿಲ್ಲ’ ಎಂದು ತಿಳಿಸಿದರು.

‘ಶಿಕಾರಿಪುರ ತಾಲ್ಲೂಕಿನಲ್ಲಿ 68 ತಾಂಡಾಗಳಿವೆ. ನಮಗೂ ಈ ವಿಚಾರದಲ್ಲಿ ವಿಷಾದ ಇದೆ. ರಾಘಣ್ಣ, ಬಿ.ಎಸ್.ಯಡಿಯೂರಪ್ಪ ನಮ್ಮ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇದು ನಮಗೂ ನುಂಗಲಾರದ ತುತ್ತಾಗಿದೆ’ ಎಂದು ಅಳಲು ತೋಡಿಕೊಂಡರು.

‘ನಮ್ಮ ತಾಂಡಾದಲ್ಲಿ 125 ಮನೆಗಳಿವೆ. ನಾವ್ಯಾರೂ ಮತ ಹಾಕುವುದಿಲ್ಲ. ಯಾವುದೇ ಪಕ್ಷದವರು ನಮ್ಮೂರಿಗೆ ಬರುವಂತಿಲ್ಲ’ ಎಂದು ಬಹಿಷ್ಕರಿಸಿದ್ದೇವೆ’ ಎಂದು ಕುಸ್ಕೂರು ತಾಂಡಾದ ಲಕ್ಷ್ಮಣ ನಾಯ್ಕ ಹೇಳಿದರು.

ಪ್ರತಿಭಟನೆಯ ನಿರ್ಧಾರ

ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಭಾನುವಾರ ತಾಲ್ಲೂಕು ಬಂಜಾರ ಸಮಿತಿ ಅಧ್ಯಕ್ಷ ವಡ್ಡಿಗೇರಿ ಮಂಜುನಾಯ್ಕ ನೇತೃತ್ವದಲ್ಲಿ ತಾಂಡಾಗಳ ಪ್ರಮುಖರು ಸೇರಿ ಸರ್ಕಾರದ ನಿರ್ಧಾರದ ವಿರುದ್ಧ ಖಂಡನಾ ಸಭೆ ನಡೆಸಿದರು. ಈ ವೇಳೆ ಪ್ರತಿಭಟನೆಯ ನಿರ್ಧಾರ ಕೈಗೊಳ್ಳಲಾಗಿದೆ.

********

ಸರ್ಕಾರದ ಮೇಲಿನ ಸಿಟ್ಟಿಗೆ ತಾಂಡಾದ ಜನರು ಚುನಾವಣೆ ಬಹಿಷ್ಕಾರದ ಫ್ಲೆಕ್ಸ್‌ಗಳನ್ನು ಹಾಕಿದ್ದಾರೆ. ಶಿಕಾರಿಪುರದಲ್ಲಿ ಸೋಮವಾರ ನಡೆಯುವ ಪ್ರತಿಭಟನೆ ನಂತರ ಆ ಬಗ್ಗೆ ಚರ್ಚಿಸಲಾಗುವುದು.

-ಸೈನಾಭಗತ್ ಮಹಾರಾಜ್, ಬಂಜಾರಾ ಸಮುದಾಯದ ಧರ್ಮಗುರು, ಮರಿಯಮ್ಮದೇವಿ ಮತ್ತು ಸೇವಾಲಾಲ್ ಮಠ, ಸಾಲೂರು

andolanait

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

5 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

5 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

6 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

6 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

11 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

11 hours ago