ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ಸೂಚಿಸಿದ ಆರೋಪದಲ್ಲಿ ಹತ್ತು ಮಂದಿ ಶಾಸಕರ ಅಮಾನತು ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸ್ಪೀಕರ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸುನೀಲ್ ಕುಮಾರ್, ಸುರೇಶ್ ಕುಮಾರ್, ಮುನಿರತ್ನ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.
ಸದನಕ್ಕೆ ಗೈರು
ಇನ್ನು ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಮೂಲಕ ಮೂಲಕ ನಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಸದಸ್ಯರು ಕೂಡಾ ಇದಕ್ಕೆ ಸಾಥ್ ನೀಡಿದ್ದಾರೆ. ಜೆಡಿಎಸ್ ಕೂಡಾ ಸದನಕ್ಕೆ ಹಾಜರಾಗಿಲ್ಲ.
ಐಎಎಸ್ ಅಧಿಕಾರಿಗಳನ್ನು ವಿಪಕ್ಷ ನಾಯಕರ ಸ್ವಾಗತಕ್ಕೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಬುಧವಾರ ಧರಣಿ ನಡೆಸಿದ್ದರು
ರಾಜಭವನಕ್ಕೆ ತೆರಳುತ್ತಿರುವ ಬಿಜೆಪಿ ನಾಯಕರು
ಅಧಿವೇಶನಕ್ಕೆ ಹತ್ತು ಸದಸ್ಯರ ಅಮಾನತು ವಿಚಾರವಾಗಿ ಸ್ಪೀಕರ್ ನಡೆಯನ್ನು ವಿರೋಧಿಸಿ ಬಿಜೆಪಿ ನಾಯಕರು ರಾಜಪಾಲರನ್ನು ಭೇಟಿ ಮಾಡಲು ತೆರಳುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇತರ ನಾಯಕರು ರಾಜಭವನಕ್ಕೆ ಕಾಲುನಡಿಗೆಯ ಮೂಲಕ ತೆರಳುತ್ತಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಲು ಆಗಮಿಸಿದ ಬಿಜೆಪಿ ಶಾಸಕರಿಗೆ ಜೆಡಿಎಸ್ ಕೂಡಾ ಸಾಥ್ ನೀಡಿದರು. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಶಾಸಕರು ರಾಜಭವನಕ್ಕೆ ಆಗಮಿಸಿದ್ದಾರೆ. ಅಮಾನತು ವಿರೋಧಿಸಿ ರಾಜಪಾಲರಿಗೆ ಜಂಟಿಯಾಗಿ ದೂರು ನೀಡಲಿದ್ದಾರೆ.
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…