BREAKING NEWS

ಶಾಸಕರ ಅಮಾನತಿಗೆ ವಿರೋಧ: ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ಸೂಚಿಸಿದ ಆರೋಪದಲ್ಲಿ ಹತ್ತು ಮಂದಿ ಶಾಸಕರ ಅಮಾನತು ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸ್ಪೀಕರ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಸ್ಪೀಕರ್ ಅವರನ್ನು ಉಪಯೋಗಿಸಿಕೊಂಡು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಶಾಸಕರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ,‌ ಸುನೀಲ್ ಕುಮಾರ್, ಸುರೇಶ್ ಕುಮಾರ್, ಮುನಿರತ್ನ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.

ಸದನಕ್ಕೆ ಗೈರು
ಇನ್ನು ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಮೂಲಕ ಮೂಲಕ ನಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಸದಸ್ಯರು ಕೂಡಾ ಇದಕ್ಕೆ ಸಾಥ್ ನೀಡಿದ್ದಾರೆ. ಜೆಡಿಎಸ್ ಕೂಡಾ ಸದನಕ್ಕೆ ಹಾಜರಾಗಿಲ್ಲ.

ಐಎಎಸ್ ಅಧಿಕಾರಿಗಳನ್ನು ವಿಪಕ್ಷ ನಾಯಕರ ಸ್ವಾಗತಕ್ಕೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಬುಧವಾರ ಧರಣಿ ನಡೆಸಿದ್ದರು

ಈ ವೇಳೆ ಪೀಠದಲ್ಲಿ ಇದ್ದ ಡೆಪ್ಯೂಟಿ ಸ್ಪೀಕರ್ ಮೇಲೆ ಕಾಗದ ಹರಿದು ಹಾಕಿದ್ದರು. ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಹತ್ತು ಮಂದಿ‌ ಶಾಸಕರನ್ನು ಅಮಾನತು ಮಾಡಲಾಗಿತ್ತು.
ಬಳಿಕ ಸದನದಿಂದ ಅಮಾನತುಗೊಂಡ ಸದಸ್ಯರನ್ನು ಮಾರ್ಷಲ್ ಗಳು ಹೊರ ಹಾಕಿದ್ದರು. ಈ ವೇಳೆ ನಡೆದ ನೂಕಾಟ ತಳ್ಳಾಟದಲ್ಲಿ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ ಅಸ್ವಸ್ಥಗೊಂಡಿದ್ದರು.

ರಾಜಭವನಕ್ಕೆ ತೆರಳುತ್ತಿರುವ ಬಿಜೆಪಿ ನಾಯಕರು
ಅಧಿವೇಶನಕ್ಕೆ ಹತ್ತು ಸದಸ್ಯರ ಅಮಾನತು ವಿಚಾರವಾಗಿ ಸ್ಪೀಕರ್ ನಡೆಯನ್ನು ವಿರೋಧಿಸಿ ಬಿಜೆಪಿ ನಾಯಕರು ರಾಜಪಾಲರನ್ನು ಭೇಟಿ ಮಾಡಲು ತೆರಳುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇತರ ನಾಯಕರು ರಾಜಭವನಕ್ಕೆ ಕಾಲುನಡಿಗೆಯ ಮೂಲಕ ತೆರಳುತ್ತಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಲು ಆಗಮಿಸಿದ ಬಿಜೆಪಿ ಶಾಸಕರಿಗೆ ಜೆಡಿಎಸ್ ಕೂಡಾ ಸಾಥ್ ನೀಡಿದರು. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಶಾಸಕರು ರಾಜಭವನಕ್ಕೆ ಆಗಮಿಸಿದ್ದಾರೆ. ಅಮಾನತು ವಿರೋಧಿಸಿ ರಾಜಪಾಲರಿಗೆ ಜಂಟಿಯಾಗಿ‌ ದೂರು ನೀಡಲಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

4 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

6 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago