ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ಸೂಚಿಸಿದ ಆರೋಪದಲ್ಲಿ ಹತ್ತು ಮಂದಿ ಶಾಸಕರ ಅಮಾನತು ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸ್ಪೀಕರ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸುನೀಲ್ ಕುಮಾರ್, ಸುರೇಶ್ ಕುಮಾರ್, ಮುನಿರತ್ನ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.
ಸದನಕ್ಕೆ ಗೈರು
ಇನ್ನು ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಮೂಲಕ ಮೂಲಕ ನಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಸದಸ್ಯರು ಕೂಡಾ ಇದಕ್ಕೆ ಸಾಥ್ ನೀಡಿದ್ದಾರೆ. ಜೆಡಿಎಸ್ ಕೂಡಾ ಸದನಕ್ಕೆ ಹಾಜರಾಗಿಲ್ಲ.
ಐಎಎಸ್ ಅಧಿಕಾರಿಗಳನ್ನು ವಿಪಕ್ಷ ನಾಯಕರ ಸ್ವಾಗತಕ್ಕೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಬುಧವಾರ ಧರಣಿ ನಡೆಸಿದ್ದರು
ರಾಜಭವನಕ್ಕೆ ತೆರಳುತ್ತಿರುವ ಬಿಜೆಪಿ ನಾಯಕರು
ಅಧಿವೇಶನಕ್ಕೆ ಹತ್ತು ಸದಸ್ಯರ ಅಮಾನತು ವಿಚಾರವಾಗಿ ಸ್ಪೀಕರ್ ನಡೆಯನ್ನು ವಿರೋಧಿಸಿ ಬಿಜೆಪಿ ನಾಯಕರು ರಾಜಪಾಲರನ್ನು ಭೇಟಿ ಮಾಡಲು ತೆರಳುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇತರ ನಾಯಕರು ರಾಜಭವನಕ್ಕೆ ಕಾಲುನಡಿಗೆಯ ಮೂಲಕ ತೆರಳುತ್ತಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಲು ಆಗಮಿಸಿದ ಬಿಜೆಪಿ ಶಾಸಕರಿಗೆ ಜೆಡಿಎಸ್ ಕೂಡಾ ಸಾಥ್ ನೀಡಿದರು. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಶಾಸಕರು ರಾಜಭವನಕ್ಕೆ ಆಗಮಿಸಿದ್ದಾರೆ. ಅಮಾನತು ವಿರೋಧಿಸಿ ರಾಜಪಾಲರಿಗೆ ಜಂಟಿಯಾಗಿ ದೂರು ನೀಡಲಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…