BREAKING NEWS

ಶಾಸಕರ ಅಮಾನತಿಗೆ ವಿರೋಧ: ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ಸೂಚಿಸಿದ ಆರೋಪದಲ್ಲಿ ಹತ್ತು ಮಂದಿ ಶಾಸಕರ ಅಮಾನತು ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸ್ಪೀಕರ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಸ್ಪೀಕರ್ ಅವರನ್ನು ಉಪಯೋಗಿಸಿಕೊಂಡು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಶಾಸಕರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ,‌ ಸುನೀಲ್ ಕುಮಾರ್, ಸುರೇಶ್ ಕುಮಾರ್, ಮುನಿರತ್ನ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.

ಸದನಕ್ಕೆ ಗೈರು
ಇನ್ನು ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಮೂಲಕ ಮೂಲಕ ನಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಸದಸ್ಯರು ಕೂಡಾ ಇದಕ್ಕೆ ಸಾಥ್ ನೀಡಿದ್ದಾರೆ. ಜೆಡಿಎಸ್ ಕೂಡಾ ಸದನಕ್ಕೆ ಹಾಜರಾಗಿಲ್ಲ.

ಐಎಎಸ್ ಅಧಿಕಾರಿಗಳನ್ನು ವಿಪಕ್ಷ ನಾಯಕರ ಸ್ವಾಗತಕ್ಕೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಬುಧವಾರ ಧರಣಿ ನಡೆಸಿದ್ದರು

ಈ ವೇಳೆ ಪೀಠದಲ್ಲಿ ಇದ್ದ ಡೆಪ್ಯೂಟಿ ಸ್ಪೀಕರ್ ಮೇಲೆ ಕಾಗದ ಹರಿದು ಹಾಕಿದ್ದರು. ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಹತ್ತು ಮಂದಿ‌ ಶಾಸಕರನ್ನು ಅಮಾನತು ಮಾಡಲಾಗಿತ್ತು.
ಬಳಿಕ ಸದನದಿಂದ ಅಮಾನತುಗೊಂಡ ಸದಸ್ಯರನ್ನು ಮಾರ್ಷಲ್ ಗಳು ಹೊರ ಹಾಕಿದ್ದರು. ಈ ವೇಳೆ ನಡೆದ ನೂಕಾಟ ತಳ್ಳಾಟದಲ್ಲಿ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ ಅಸ್ವಸ್ಥಗೊಂಡಿದ್ದರು.

ರಾಜಭವನಕ್ಕೆ ತೆರಳುತ್ತಿರುವ ಬಿಜೆಪಿ ನಾಯಕರು
ಅಧಿವೇಶನಕ್ಕೆ ಹತ್ತು ಸದಸ್ಯರ ಅಮಾನತು ವಿಚಾರವಾಗಿ ಸ್ಪೀಕರ್ ನಡೆಯನ್ನು ವಿರೋಧಿಸಿ ಬಿಜೆಪಿ ನಾಯಕರು ರಾಜಪಾಲರನ್ನು ಭೇಟಿ ಮಾಡಲು ತೆರಳುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇತರ ನಾಯಕರು ರಾಜಭವನಕ್ಕೆ ಕಾಲುನಡಿಗೆಯ ಮೂಲಕ ತೆರಳುತ್ತಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಲು ಆಗಮಿಸಿದ ಬಿಜೆಪಿ ಶಾಸಕರಿಗೆ ಜೆಡಿಎಸ್ ಕೂಡಾ ಸಾಥ್ ನೀಡಿದರು. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಶಾಸಕರು ರಾಜಭವನಕ್ಕೆ ಆಗಮಿಸಿದ್ದಾರೆ. ಅಮಾನತು ವಿರೋಧಿಸಿ ರಾಜಪಾಲರಿಗೆ ಜಂಟಿಯಾಗಿ‌ ದೂರು ನೀಡಲಿದ್ದಾರೆ.

andolanait

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

8 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

9 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

10 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

10 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

11 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

13 hours ago