BREAKING NEWS

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಅನಧಿಕೃತ ಕ್ಯಾಂಟೀನ್ ತೆರವಿಗೆ ಆದೇಶ

ಮೈಸೂರು: ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜು ಆವರಣದಲ್ಲಿ ಅವಧಿ ಮೀರಿದ ಬಳಿಕವೂ ಅಕ್ರಮವಾಗಿ ನಡೆಸುತ್ತಿದ್ದ ಕ್ಯಾಂಟೀನ್ ತೆರವುಗೊಳಿಸುವಂತೆ ಕರ್ನಾಟಕ ಸಾರ್ವಜನಿಕ ಆವರಣಗಳ ಸಕ್ಷಮ ಪ್ರಾಧಿಕಾರಗಳ ಜಿಲ್ಲಾ ನ್ಯಾಯಾಲಯವು ಆದೇಶ ನೀಡಿದೆ.

ದೇವರಾಜ ಮೊಹಲ್ಲಾದ ಗರಡಿ ರಸ್ತೆ ನಿವಾಸಿ ಎಚ್.ಪಿ.ಪ್ರಭಾವತಿ ಎಂಬವರು ೨೧,೩೦೦ ರೂ. ಭದ್ರತಾ ಠೇವಣಿಯೊಂದಿಗೆ ಕಾಲೇಜು ಆವರಣದಲ್ಲಿ ತಿಂಗಳಿಗೆ ೭,೧೦೦ ರೂ. ಬಾಡಿಗೆಯಂತೆ ಕ್ಯಾಂಟೀನ್ ನಡೆಸಲು ೨೦೧೭ರಿಂದ ೨೦೨೨ರ ವರೆಗೆ ಕರಾರು ಮಾಡಿಕೊಳ್ಳಲಾಗಿತ್ತು. ಆದರೆ, ೫೮ ತಿಂಗಳ ಬಾಡಿಗೆ ಬದಲಿಗೆ ಕೇವಲ ೨೬ ತಿಂಗಳ ಬಾಡಿಗೆ ನೀಡಲಾಗಿತ್ತು. ಅಲ್ಲದೆ, ೫೨ ತಿಂಗಳ ವಿದ್ಯುತ್ ಬಿಲ್ ೨.೬ ಲಕ್ಷ ರೂ. ಪಾವತಿಸದೆ ಕರಾರು ಉಲ್ಲಂಘನೆ ಮಾಡಲಾಗಿತ್ತು.

ವಿಧಿಸಿದ ಷರತ್ತುಗಳ ಅನ್ವಯ ಪ್ರಾಂಶುಪಾಲರ ನಿರ್ಧಾರವೇ ಅಂತಿಮ. ಆದರೆ, ಇದನ್ನು ಮರೆಮಾಚಿ ಬಾಡಿಗೆದಾರರಾದ ಎಚ್.ಪಿ.ಪ್ರಭಾವತಿ ಅವರು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿ, ನ್ಯಾಯಾಲಯದ ಆದೇಶದ ನಡುವೆಯೂ ಒಪ್ಪಂದ ಉಲ್ಲಂಘಿಸಿ ಹಸ್ತಾಂತರ ಮಾಡಿರಲಿಲ್ಲ.

ಜತೆಗೆ, ಕೋವಿಡ್-೧೯ರ ಸಂಕಷ್ಟದ ಸಮಯದಲ್ಲಿ ವಿನಾಯಿತಿ ನೀಡಿದ್ದರೂ ವಿನಾಕಾರಣ ಹಸ್ತಾಂತರ ಮಾಡದೆ ತೊಂದರೆ ನೀಡಿದ್ದರು. ಈ ವಿಷಯವನ್ನು ಮನಗಂಡ ಕರ್ನಾಟಕ ಸಾರ್ವಜನಿಕ ಆವರಣಗಳ ಅನಧಿಕೃತ ಅನುಭವದಾರರನ್ನು ಒಕ್ಕಲೆಬ್ಬಿಸುವ ಕಾಯಿದೆ ೧೯೭೪ರ ಸಕ್ಷಮ ಪ್ರಾಧಿಕಾರಗಳ ನ್ಯಾಯಾಲಯವು, ಪ್ರಕರಣವನ್ನು ಇತ್ಯರ್ಥಪಡಿಸಿ ಕಾಲೇಜು ಕ್ಯಾಂಟಿನ್ ಅನ್ನು ತತಕ್ಷಣವೇ ತೆರವುಗೊಳಿಸಿ ಬಾಡಿಗೆ ಬಾಕಿ ೨,೪೩,೮೦೦ ರೂ. ಮತ್ತು ವಿದ್ಯುತ್ ಹಾಗೂ ನೀರಿನ ಬಾಕಿ ೨.೬೦ ಲಕ್ಷ ರೂ. ಸೇರಿದಂತೆ ಒಟ್ಟಾರೆ ೫,೦೩,೮೦೦ ರೂ. ಅನ್ನು ಕೂಡಲೇ ಪಾವತಿಸು ವುದಲ್ಲದೇ, ಕೂಡಲೇ ಕ್ಯಾಂಟೀನ್ ತೆರವು ಮಾಡುವಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ಕಾಲೇಜು ಪ್ರಾಂಶುಪಾಲರಾದ ಡಾ.ಡಿ.ರವಿ ಮತ್ತು ಸರ್ಕಾರಿ ವಕೀಲರಾದ ಉಮೇಶ್ ಕುಮಾರ್ ಅವರ ಸತತ ಕಾನೂನು ಹೋರಾಟದ ಫಲವಾಗಿ ವಿದ್ಯಾರ್ಥಿಗಳ ಪರವಾದ ಆದೇಶ ಬಂದಿದೆ.

andolanait

Recent Posts

ಜಮ್ಮು-ಕಾಶ್ಮೀರದಲ್ಲಿ ಭೀಕರ ಹಿಮಪಾತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡರ್‌ಬಾಲ್‌ ಜಿಲ್ಲೆಯ ಝೋಜಿಲಾ ಪಾಸ್‌ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…

2 mins ago

ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

ವಾಷಿಂಗ್ಟನ್:‌ ಇರಾನ್‌ ಬಳಿಕ ಇದೀಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ. ಕ್ಯೂಬಾ ದೇಸದ ಮೇಲೆ…

11 mins ago

ಆಂದೋಲನದ ವರದಿ ಬಳಿಕ ಎಚ್ಚೆತ್ತ ಜನಪ್ರತಿನಿಧಿಗಳು: ರಸ್ತೆ ಕಾಮಗಾರಿಗೆ ಶಾಸಕ ಜಿಟಿಡಿ ಗುದ್ದಲಿ ಪೂಜೆ

ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ…

24 mins ago

ರಸ್ತೆ ದಾಟುವಾಗ ಕಾರು ಡಿಕ್ಕಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ…

42 mins ago

ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ…

52 mins ago

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ…

1 hour ago