BREAKING NEWS

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಅನಧಿಕೃತ ಕ್ಯಾಂಟೀನ್ ತೆರವಿಗೆ ಆದೇಶ

ಮೈಸೂರು: ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜು ಆವರಣದಲ್ಲಿ ಅವಧಿ ಮೀರಿದ ಬಳಿಕವೂ ಅಕ್ರಮವಾಗಿ ನಡೆಸುತ್ತಿದ್ದ ಕ್ಯಾಂಟೀನ್ ತೆರವುಗೊಳಿಸುವಂತೆ ಕರ್ನಾಟಕ ಸಾರ್ವಜನಿಕ ಆವರಣಗಳ ಸಕ್ಷಮ ಪ್ರಾಧಿಕಾರಗಳ ಜಿಲ್ಲಾ ನ್ಯಾಯಾಲಯವು ಆದೇಶ ನೀಡಿದೆ.

ದೇವರಾಜ ಮೊಹಲ್ಲಾದ ಗರಡಿ ರಸ್ತೆ ನಿವಾಸಿ ಎಚ್.ಪಿ.ಪ್ರಭಾವತಿ ಎಂಬವರು ೨೧,೩೦೦ ರೂ. ಭದ್ರತಾ ಠೇವಣಿಯೊಂದಿಗೆ ಕಾಲೇಜು ಆವರಣದಲ್ಲಿ ತಿಂಗಳಿಗೆ ೭,೧೦೦ ರೂ. ಬಾಡಿಗೆಯಂತೆ ಕ್ಯಾಂಟೀನ್ ನಡೆಸಲು ೨೦೧೭ರಿಂದ ೨೦೨೨ರ ವರೆಗೆ ಕರಾರು ಮಾಡಿಕೊಳ್ಳಲಾಗಿತ್ತು. ಆದರೆ, ೫೮ ತಿಂಗಳ ಬಾಡಿಗೆ ಬದಲಿಗೆ ಕೇವಲ ೨೬ ತಿಂಗಳ ಬಾಡಿಗೆ ನೀಡಲಾಗಿತ್ತು. ಅಲ್ಲದೆ, ೫೨ ತಿಂಗಳ ವಿದ್ಯುತ್ ಬಿಲ್ ೨.೬ ಲಕ್ಷ ರೂ. ಪಾವತಿಸದೆ ಕರಾರು ಉಲ್ಲಂಘನೆ ಮಾಡಲಾಗಿತ್ತು.

ವಿಧಿಸಿದ ಷರತ್ತುಗಳ ಅನ್ವಯ ಪ್ರಾಂಶುಪಾಲರ ನಿರ್ಧಾರವೇ ಅಂತಿಮ. ಆದರೆ, ಇದನ್ನು ಮರೆಮಾಚಿ ಬಾಡಿಗೆದಾರರಾದ ಎಚ್.ಪಿ.ಪ್ರಭಾವತಿ ಅವರು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿ, ನ್ಯಾಯಾಲಯದ ಆದೇಶದ ನಡುವೆಯೂ ಒಪ್ಪಂದ ಉಲ್ಲಂಘಿಸಿ ಹಸ್ತಾಂತರ ಮಾಡಿರಲಿಲ್ಲ.

ಜತೆಗೆ, ಕೋವಿಡ್-೧೯ರ ಸಂಕಷ್ಟದ ಸಮಯದಲ್ಲಿ ವಿನಾಯಿತಿ ನೀಡಿದ್ದರೂ ವಿನಾಕಾರಣ ಹಸ್ತಾಂತರ ಮಾಡದೆ ತೊಂದರೆ ನೀಡಿದ್ದರು. ಈ ವಿಷಯವನ್ನು ಮನಗಂಡ ಕರ್ನಾಟಕ ಸಾರ್ವಜನಿಕ ಆವರಣಗಳ ಅನಧಿಕೃತ ಅನುಭವದಾರರನ್ನು ಒಕ್ಕಲೆಬ್ಬಿಸುವ ಕಾಯಿದೆ ೧೯೭೪ರ ಸಕ್ಷಮ ಪ್ರಾಧಿಕಾರಗಳ ನ್ಯಾಯಾಲಯವು, ಪ್ರಕರಣವನ್ನು ಇತ್ಯರ್ಥಪಡಿಸಿ ಕಾಲೇಜು ಕ್ಯಾಂಟಿನ್ ಅನ್ನು ತತಕ್ಷಣವೇ ತೆರವುಗೊಳಿಸಿ ಬಾಡಿಗೆ ಬಾಕಿ ೨,೪೩,೮೦೦ ರೂ. ಮತ್ತು ವಿದ್ಯುತ್ ಹಾಗೂ ನೀರಿನ ಬಾಕಿ ೨.೬೦ ಲಕ್ಷ ರೂ. ಸೇರಿದಂತೆ ಒಟ್ಟಾರೆ ೫,೦೩,೮೦೦ ರೂ. ಅನ್ನು ಕೂಡಲೇ ಪಾವತಿಸು ವುದಲ್ಲದೇ, ಕೂಡಲೇ ಕ್ಯಾಂಟೀನ್ ತೆರವು ಮಾಡುವಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ಕಾಲೇಜು ಪ್ರಾಂಶುಪಾಲರಾದ ಡಾ.ಡಿ.ರವಿ ಮತ್ತು ಸರ್ಕಾರಿ ವಕೀಲರಾದ ಉಮೇಶ್ ಕುಮಾರ್ ಅವರ ಸತತ ಕಾನೂನು ಹೋರಾಟದ ಫಲವಾಗಿ ವಿದ್ಯಾರ್ಥಿಗಳ ಪರವಾದ ಆದೇಶ ಬಂದಿದೆ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

2 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

3 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

3 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

4 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

5 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

5 hours ago