BREAKING NEWS

ಶಾಂತಿಭಂಗ ಮಾಡುವ ಸಂಘಟನೆಗಳ ಮೇಲೆ ನಿಗಾ ವಹಿಸಲಾಗುವುದು: ಕಾಂಗ್ರೆಸ್‌

ಬೆಂಗಳೂರು: ಅತ್ಯಾಚಾರ, ಅನಾಚಾರ, ಶಾಂತಿಭಂಗ ಮುಂತಾದ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಬಗ್ಗೆ ನಮ್ಮ ಸರ್ಕಾರ ಚಿಂತನೆ ನಡೆಸಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿದ್ದು 2019ರ ಪ್ರಕರಣವೊಂದನ್ನು ಉಲ್ಲೇಖಿಸಲಾಗಿದೆ. ಚಿತ್ತಾಪುರದಲ್ಲಿ ಆರ್‍ಎಸ್‍ಎಸ್‍ನ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ವಂಚಿಸಿ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.

ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯವೆಸಗುವುದೇ ಆರ್‍ಎಸ್‍ಎಸ್ ಶಾಖೆಯ ನಿತ್ಯ ಪಾಠವೇ ಎಂದು ಬಿಜೆಪಿಯನ್ನು ಪ್ರಶ್ನಿಸಲಾಗಿದೆ.

ಟ್ವೀಟ್‍ನಲ್ಲಿ ಮಹಿಳೆ ನೀಡಿರುವ ದೂರು ಹಾಗೂ ಅದನ್ನು ಆಧರಿಸಿ ದಾಖಲಾಗಿರುವ ಎಫ್‍ಐಆರ್ ಬಗ್ಗೆ ಮಾಹಿತಿ ನೀಡಲಾಗಿದೆ. ಅದರಲ್ಲಿ ವ್ಯವಹಾರಿಕ ವ್ಯಕ್ತಿಯೊಬ್ಬರು ವಿವಾಹಿತ ಮಹಿಳೆಗೆ ವಂಚಿಸಿ ಅಕ್ರಮ ಸಂಬಂಧ ಬೆಳೆಸಿದ್ದು, ಇತ್ತೀಚೆಗೆ ಆಕೆಯನ್ನು ನಿರಾಕರಿಸುತ್ತಿದ್ದಾರೆ ಎಂಬ ಆರೋಪ ಇದೆ. ಮಹಿಳೆಯಿಂದ ಸಾಲ ಮಾಡಿಸಿ, ಚಿನ್ನ ಪಡೆದುಕೊಂಡು ಅವರ ಸಾಂಸಾರಿಕ ಜೀವನವನ್ನು ಹಾಳು ಮಾಡಲಾಗಿದೆ ಎಂದು ದೂರಲಾಗಿದೆ.

ಟ್ವಿಟರ್ ನಲ್ಲಿ ಆರ್‍ಎಸ್‍ಎಸ್ ಸಮವಸ್ತ್ರಧಾರಿಗಳ ಫೋಟೋ ಲಗತ್ತಿಸಿದ್ದು ಅದರಲ್ಲಿ ಒಬ್ಬ ವ್ಯಕ್ತಿಯ ಮುಖಕ್ಕೆ ವೃತ್ತದ ಗುರುತು ಮಾಡಲಾಗಿದೆ.

ಈ ಮೊದಲು ಬಜರಂಗದಳ, ಆರ್‍ಎಸ್‍ಎಸ್ ಸೇರಿದಂತೆ ಯಾವುದೇ ವ್ಯಕ್ತಿಗಳು ಕಾನೂನು ಮೀರಿ ವರ್ತಿಸಿದರೆ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು

ಈಗ ಅವರದೇ ಕ್ಷೇತ್ರದ 4 ವರ್ಷಗಳ ಹಿಂದಿನ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಶಾಂತಿಭಂಗ ಮುಂತಾದ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಗಳನ್ನು ನಿಯಂತ್ರಿಸಲು ಚಿಂತನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ವಿಳಂಬದಿಂದಾಗಿ ಜನರಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಕೇಳಿಬರುತ್ತಿದ್ದು, ಅದರ ದಿಕ್ಕು ತಪ್ಪಿಸಲು ಈ ರೀತಿಯ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂಬ ಅಸಮಾಧಾನವೂ ಕೇಳಿಬಂದಿದೆ.

andolanait

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

27 mins ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

47 mins ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

58 mins ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

1 hour ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

1 hour ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

2 hours ago