BREAKING NEWS

ಸರ್ವಾಧಿಕಾರಿ ಆಡಳಿತವನ್ನು ಕಿತ್ತೊಗೆಯಲು ಸಂಘಟನಾತ್ಮಕ ಹೋರಾಟ ಅಗತ್ಯ : ಮಲ್ಲಿಕಾರ್ಜುನ ಖರ್ಗೆ

ಹೈದರಾಬಾದ್ : ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ವಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸರ್ವಾಧಿಕಾರಿ ಆಡಳಿತವನ್ನು ಕಿತ್ತೊಗೆಯಲು ಸಂಘಟನಾತ್ಮಕ ಹೋರಾಟ ಅಗತ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

ಹೈದ್ರಾಬಾದ್‍ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯಕಾರಿ ಸಭೆಯ ಮುಂದುವರೆದ ಸರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಕ್ಷದಲ್ಲಿ ಶಿಸ್ತು ಮತ್ತು ಏಕತೆಗೆ ಆದ್ಯತೆ ನೀಡುವಂತೆ ತಾಕೀತು ಮಾಡಿತು.
2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವುದು ಮತ್ತು ಕೇಂದ್ರದಲ್ಲಿ ಸರ್ಕಾರ ರಚಿಸಲು ಪರ್ಯಾಯ ಶಕ್ತಿ ರಚನೆಗೆ ಶ್ರದ್ಧೆಯಿಂದ ಕೆಲಸ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರತಿದಿನವೂ ಅನಗತ್ಯ ವಿವಾದವನ್ನು ಸೃಷ್ಟಿಸುವ ಮೂಲಕ ಜನರ ಮೂಲಭೂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇತ್ತೀಚೆಗೆ ಇಂಡಿಯಾ ಕೂಟ ಮುಂಬೈನಲ್ಲಿ ಸಭೆ ನಡೆಸಿದಾಗ ಕೇಂದ್ರಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ವಿಚಾರ ಕುರಿತು ಅಧ್ಯಯನ ಸಮಿತಿ ರಚಿಸಿತ್ತು. ಸಂಪ್ರದಾಯದ ವಿರುದ್ಧವಾಗಿ ಆ ಸಮಿತಿಗೆ ಮಾಜಿ ರಾಷ್ಟ್ರಪತಿಯವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ದೂರಿದರು.

ಮುಂದಿನ ಮೂರು ತಿಂಗಳಲ್ಲಿ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಗೆ 6 ತಿಂಗಳು ಮಾತ್ರ ಕಾಲಾವಕಾಶವಿದೆ. ಹೀಗಾಗಿ ಪ್ರತಿ ಕ್ಷಣವೂ ಕಾಂಗ್ರೆಸಿಗರಿಗೆ ಅಮೂಲ್ಯವಾದುದು ಎಂದು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿ ಸಂಭವನೀಯ ಚುನಾವಣೆಗೆ ಪಕ್ಷ ಸಿದ್ಧವಾಗಿರಬೇಕು. ಛತ್ತೀಸ್‍ಘಡ, ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಜಾರಿಗೊಳಿಸಿದ ಕಲ್ಯಾಣ ಕಾರ್ಯಕ್ರಮಗಳು ದೇಶಕ್ಕೆ ಮಾದರಿಯಾಗಿವೆ. ಇವುಗಳನ್ನು ವ್ಯಾಪಕ ಪ್ರಚಾರ ಮಾಡಬೇಕು. ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಹಿಮಾಚಲ ಪ್ರದೇಶ, ಕರ್ನಾಟಕದ ಗೆಲುವು, ಪಕ್ಷದ ಹುಮ್ಮಸ್ಸನ್ನು ಹೆಚ್ಚಿಸಿದೆ ಎಂದರು.

ಪಕ್ಷದ ನಾಯಕರು, ಕಾರ್ಯಕರ್ತರು ಸಂಘಟನೆಯ ಹಿತಾಸಕ್ತಿಗೆ ಧಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಮಾಧ್ಯಮಗಳ ಮುಂದೆ ಅನಗತ್ಯ ವಿಚಾರಗಳನ್ನು ಚರ್ಚಿಸದೆ ಸ್ವಯಂನಿಯಂತ್ರಣ ಕ್ರೂಢೀಕರಿಸಿಕೊಳ್ಳಬೇಕು. ಒಗ್ಗಟ್ಟಿನ ಬಲ, ಶಿಸ್ತು ಗೆಲುವಿಗೆ ಸಹಕಾರಿ ಎಂಬುದು ಕರ್ನಾಟಕದಲ್ಲಿ ಸಾಬೀತು ಮಾಡಿದೆ.

ಮುಂದಿನ ದಿನಗಳಲ್ಲಿ ಸಂವಿಧಾನದ ಸಂರಕ್ಷಣೆ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ರಾಜಕೀಯ ಬದಲಾವಣೆ ಅನಿವಾರ್ಯವಾಗಿದೆ. ಇವು ಕೇವಲ ಕಾಂಗ್ರೆಸ್‍ನ ಸವಾಲುಗಳಲ್ಲ. ಭಾರತೀಯರ ಪ್ರತಿಯೊಬ್ಬರ ಮುಂದಿರುವ ಅಪಾಯ ಎಂದು ಎಚ್ಚರಿಸಿದರು.

ಪ್ರತಿಯೊಂದು ರಾಜ್ಯದ ಕಾಂಗ್ರೆಸ್ ಘಟಕವು ಬೂತ್, ಬ್ಲಾಕ್, ಜಿಲ್ಲಾಮಟ್ಟಗಳಲ್ಲಿ ಸಮಿತಿಗಳನ್ನು ಸಿದ್ಧವಾಗಿಟ್ಟುಕೊಂಡಿರಬೇಕು. ಕಾಲಕಾಲಕ್ಕೆ ನಿಯಮಿತ ಕಾರ್ಯಕ್ರಮಗಳನ್ನು ನೀಡಬೇಕು. ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಲು ಆರಂಭಿಸಬೇಕು. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಲೋಪಗಳನ್ನು ಜನರ ಮುಂದಿಡಬೇಕು.

ರೈತರು, ಕಾರ್ಮಿಕರು, ಮಹಿಳೆಯರು, ಸಾಮಾಜಿಕ ಸ್ಥಿತಿಗತಿಗಳಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳನ್ನು ವಿಶ್ಲೇಷಿಸಬೇಕು. ಜನ ಸಂಕಷ್ಟದಲ್ಲಿದ್ದಾಗ ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ ಎಂದರು.
ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಶತಮಾನೋತ್ಸವವನ್ನು 2024 ರಲ್ಲಿ ಆಚರಿಸಲಾಗುತ್ತಿದೆ. ಆ ವೇಳೆಗೆ ಬಿಜೆಪಿಯನ್ನು ಅಕಾರದಿಂದ ಕಿತ್ತೊಗೆದು ಗಾಂಧಿಜೀಯವರಿಗೆ ನಾವು ಗೌರವ ಸಲ್ಲಿಸಬೇಕು. ತೆಲಂಗಾಣದಿಂದ ಹೊಸ ಶಕ್ತಿ ಮತ್ತು ಹೊಸ ಸಂದೇಶದೊಂದಿಗೆ ನಾವು ಜನರ ಮುಂದೆ ಹೋಗುತ್ತಿದ್ದೇವೆ. ಬಿಜೆಪಿ ದುರಾಡಳಿತದಿಂದ ಜನರ ದುಃಖವನ್ನು ಮುಕ್ತಗೊಳಿಸಲು ಹಾಗೂ ಎಲ್ಲಾ ಚುನಾವಣೆ ಗೆಲ್ಲಲು ಸಂಕಲ್ಪ ಬದ್ಧರಾಗಿರುವಂತೆ ಸಲಹೆ ನೀಡಿದ್ದಾರೆ.

lokesh

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

9 mins ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

2 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

3 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

3 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

3 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

4 hours ago