BREAKING NEWS

ಸರ್ವಾಧಿಕಾರಿ ಆಡಳಿತವನ್ನು ಕಿತ್ತೊಗೆಯಲು ಸಂಘಟನಾತ್ಮಕ ಹೋರಾಟ ಅಗತ್ಯ : ಮಲ್ಲಿಕಾರ್ಜುನ ಖರ್ಗೆ

ಹೈದರಾಬಾದ್ : ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ವಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸರ್ವಾಧಿಕಾರಿ ಆಡಳಿತವನ್ನು ಕಿತ್ತೊಗೆಯಲು ಸಂಘಟನಾತ್ಮಕ ಹೋರಾಟ ಅಗತ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

ಹೈದ್ರಾಬಾದ್‍ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯಕಾರಿ ಸಭೆಯ ಮುಂದುವರೆದ ಸರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಕ್ಷದಲ್ಲಿ ಶಿಸ್ತು ಮತ್ತು ಏಕತೆಗೆ ಆದ್ಯತೆ ನೀಡುವಂತೆ ತಾಕೀತು ಮಾಡಿತು.
2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವುದು ಮತ್ತು ಕೇಂದ್ರದಲ್ಲಿ ಸರ್ಕಾರ ರಚಿಸಲು ಪರ್ಯಾಯ ಶಕ್ತಿ ರಚನೆಗೆ ಶ್ರದ್ಧೆಯಿಂದ ಕೆಲಸ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರತಿದಿನವೂ ಅನಗತ್ಯ ವಿವಾದವನ್ನು ಸೃಷ್ಟಿಸುವ ಮೂಲಕ ಜನರ ಮೂಲಭೂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇತ್ತೀಚೆಗೆ ಇಂಡಿಯಾ ಕೂಟ ಮುಂಬೈನಲ್ಲಿ ಸಭೆ ನಡೆಸಿದಾಗ ಕೇಂದ್ರಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ವಿಚಾರ ಕುರಿತು ಅಧ್ಯಯನ ಸಮಿತಿ ರಚಿಸಿತ್ತು. ಸಂಪ್ರದಾಯದ ವಿರುದ್ಧವಾಗಿ ಆ ಸಮಿತಿಗೆ ಮಾಜಿ ರಾಷ್ಟ್ರಪತಿಯವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ದೂರಿದರು.

ಮುಂದಿನ ಮೂರು ತಿಂಗಳಲ್ಲಿ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಗೆ 6 ತಿಂಗಳು ಮಾತ್ರ ಕಾಲಾವಕಾಶವಿದೆ. ಹೀಗಾಗಿ ಪ್ರತಿ ಕ್ಷಣವೂ ಕಾಂಗ್ರೆಸಿಗರಿಗೆ ಅಮೂಲ್ಯವಾದುದು ಎಂದು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿ ಸಂಭವನೀಯ ಚುನಾವಣೆಗೆ ಪಕ್ಷ ಸಿದ್ಧವಾಗಿರಬೇಕು. ಛತ್ತೀಸ್‍ಘಡ, ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಜಾರಿಗೊಳಿಸಿದ ಕಲ್ಯಾಣ ಕಾರ್ಯಕ್ರಮಗಳು ದೇಶಕ್ಕೆ ಮಾದರಿಯಾಗಿವೆ. ಇವುಗಳನ್ನು ವ್ಯಾಪಕ ಪ್ರಚಾರ ಮಾಡಬೇಕು. ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಹಿಮಾಚಲ ಪ್ರದೇಶ, ಕರ್ನಾಟಕದ ಗೆಲುವು, ಪಕ್ಷದ ಹುಮ್ಮಸ್ಸನ್ನು ಹೆಚ್ಚಿಸಿದೆ ಎಂದರು.

ಪಕ್ಷದ ನಾಯಕರು, ಕಾರ್ಯಕರ್ತರು ಸಂಘಟನೆಯ ಹಿತಾಸಕ್ತಿಗೆ ಧಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಮಾಧ್ಯಮಗಳ ಮುಂದೆ ಅನಗತ್ಯ ವಿಚಾರಗಳನ್ನು ಚರ್ಚಿಸದೆ ಸ್ವಯಂನಿಯಂತ್ರಣ ಕ್ರೂಢೀಕರಿಸಿಕೊಳ್ಳಬೇಕು. ಒಗ್ಗಟ್ಟಿನ ಬಲ, ಶಿಸ್ತು ಗೆಲುವಿಗೆ ಸಹಕಾರಿ ಎಂಬುದು ಕರ್ನಾಟಕದಲ್ಲಿ ಸಾಬೀತು ಮಾಡಿದೆ.

ಮುಂದಿನ ದಿನಗಳಲ್ಲಿ ಸಂವಿಧಾನದ ಸಂರಕ್ಷಣೆ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ರಾಜಕೀಯ ಬದಲಾವಣೆ ಅನಿವಾರ್ಯವಾಗಿದೆ. ಇವು ಕೇವಲ ಕಾಂಗ್ರೆಸ್‍ನ ಸವಾಲುಗಳಲ್ಲ. ಭಾರತೀಯರ ಪ್ರತಿಯೊಬ್ಬರ ಮುಂದಿರುವ ಅಪಾಯ ಎಂದು ಎಚ್ಚರಿಸಿದರು.

ಪ್ರತಿಯೊಂದು ರಾಜ್ಯದ ಕಾಂಗ್ರೆಸ್ ಘಟಕವು ಬೂತ್, ಬ್ಲಾಕ್, ಜಿಲ್ಲಾಮಟ್ಟಗಳಲ್ಲಿ ಸಮಿತಿಗಳನ್ನು ಸಿದ್ಧವಾಗಿಟ್ಟುಕೊಂಡಿರಬೇಕು. ಕಾಲಕಾಲಕ್ಕೆ ನಿಯಮಿತ ಕಾರ್ಯಕ್ರಮಗಳನ್ನು ನೀಡಬೇಕು. ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಲು ಆರಂಭಿಸಬೇಕು. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಲೋಪಗಳನ್ನು ಜನರ ಮುಂದಿಡಬೇಕು.

ರೈತರು, ಕಾರ್ಮಿಕರು, ಮಹಿಳೆಯರು, ಸಾಮಾಜಿಕ ಸ್ಥಿತಿಗತಿಗಳಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳನ್ನು ವಿಶ್ಲೇಷಿಸಬೇಕು. ಜನ ಸಂಕಷ್ಟದಲ್ಲಿದ್ದಾಗ ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ ಎಂದರು.
ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಶತಮಾನೋತ್ಸವವನ್ನು 2024 ರಲ್ಲಿ ಆಚರಿಸಲಾಗುತ್ತಿದೆ. ಆ ವೇಳೆಗೆ ಬಿಜೆಪಿಯನ್ನು ಅಕಾರದಿಂದ ಕಿತ್ತೊಗೆದು ಗಾಂಧಿಜೀಯವರಿಗೆ ನಾವು ಗೌರವ ಸಲ್ಲಿಸಬೇಕು. ತೆಲಂಗಾಣದಿಂದ ಹೊಸ ಶಕ್ತಿ ಮತ್ತು ಹೊಸ ಸಂದೇಶದೊಂದಿಗೆ ನಾವು ಜನರ ಮುಂದೆ ಹೋಗುತ್ತಿದ್ದೇವೆ. ಬಿಜೆಪಿ ದುರಾಡಳಿತದಿಂದ ಜನರ ದುಃಖವನ್ನು ಮುಕ್ತಗೊಳಿಸಲು ಹಾಗೂ ಎಲ್ಲಾ ಚುನಾವಣೆ ಗೆಲ್ಲಲು ಸಂಕಲ್ಪ ಬದ್ಧರಾಗಿರುವಂತೆ ಸಲಹೆ ನೀಡಿದ್ದಾರೆ.

lokesh

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

15 hours ago