ಬೆಂಗಳೂರು: ರಾಜ್ಯಸಭಾ ಚುನಾವಣೆ ಬಳಿಕ ʼವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆʼ ಎಂಬ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೆ ನಗರದ ಹೆಚ್ಚುವರಿ ಮುಖ್ಯ ಮೆಟ್ರೊ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ.
ಬಂಧನಕ್ಕೊಳಗಾಗಿದ್ದ ದೆಹಲಿಯ ಕಿಶನ್ ಗಂಜಂನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ ಮತ್ತು ಬೆಂಗಳೂರಿನ ಜಯಮಹಲ್ ನಿವಾಸಿ ಡಿ.ಎಸ್. ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಹೆಚ್ಚುವರಿ ಮುಖ್ಯ ಮೆಟ್ರೊ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನ ನ್ಯಾಯಾಧೀಶ ವಿ. ವಿಜೇತ್ ಪುರಸ್ಕರಿಸಿದ್ದಾರೆ.
ʼಆರೋಪಿಗಳು ಒಂದು ಲಕ್ಷ ರೂಪಾಯಿ ಮೊತ್ತದ ಮುಚ್ಚಳಿಕೆ ನೀಡಬೇಕು. ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು. ಆರೋಪಿಗಳು ಭಾರತ ಬಿಟ್ಟು ಹೊರಹೋಗಬಾರದು. ವಿಚಾರಣೆಗಳಿಗೆ ಹಾಜರಾಗಬೇಕು ಮತ್ತು ಇಂತಹ ಅಪರಧ ಕೃತ್ಯಗಳಲ್ಲಿ ಭಾಗಿಯಾಗಬಾರದು” ಎಂದು ಷರತ್ತುಗಳನ್ನು ವಿಧಿಸಿದೆ.
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…
ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…