BREAKING NEWS

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಪ್ರಕರಣ: ಆರೋಪಿಗಳಿಗೆ ಜಾಮೀನು

ಬೆಂಗಳೂರು: ರಾಜ್ಯಸಭಾ ಚುನಾವಣೆ ಬಳಿಕ ʼವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆʼ ಎಂಬ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೆ ನಗರದ ಹೆಚ್ಚುವರಿ ಮುಖ್ಯ ಮೆಟ್ರೊ ಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ.

ಬಂಧನಕ್ಕೊಳಗಾಗಿದ್ದ ದೆಹಲಿಯ ಕಿಶನ್‌ ಗಂಜಂನ ಮೊಹಮ್ಮದ್‌ ಇಲ್ತಾಜ್‌, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್‌ ಶಫಿ ನಾಶಿಪುಡಿ ಮತ್ತು ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ.ಎಸ್.‌ ಮುನಾವರ್‌ ಅಹ್ಮದ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಹೆಚ್ಚುವರಿ ಮುಖ್ಯ ಮೆಟ್ರೊ ಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನ ನ್ಯಾಯಾಧೀಶ ವಿ. ವಿಜೇತ್‌ ಪುರಸ್ಕರಿಸಿದ್ದಾರೆ.

ʼಆರೋಪಿಗಳು ಒಂದು ಲಕ್ಷ ರೂಪಾಯಿ ಮೊತ್ತದ ಮುಚ್ಚಳಿಕೆ ನೀಡಬೇಕು. ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು. ಆರೋಪಿಗಳು ಭಾರತ ಬಿಟ್ಟು ಹೊರಹೋಗಬಾರದು. ವಿಚಾರಣೆಗಳಿಗೆ ಹಾಜರಾಗಬೇಕು ಮತ್ತು ಇಂತಹ ಅಪರಧ ಕೃತ್ಯಗಳಲ್ಲಿ ಭಾಗಿಯಾಗಬಾರದು” ಎಂದು ಷರತ್ತುಗಳನ್ನು ವಿಧಿಸಿದೆ.

andolana

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

1 hour ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

1 hour ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

1 hour ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

2 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

2 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

2 hours ago