BREAKING NEWS

ಪಾಕ್ ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ : ಮಾಜಿ ಪ್ರಧಾನಿ ನವಾಜ್ ಷರೀಫ್

ಇಸ್ಲಾಮಾಬಾದ್ : ಭಾರತವು ಚಂದ್ರನನ್ನು ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬೇಸರ ವ್ಯಕ್ತಪಡಿಸಿದ್ದಾರೆ.

ವೀಡಿಯೋ ಲಿಂಕ್ ಮೂಲಕ ಲಾಹೋರ್ ನ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಭಾರತವು ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನು ಬಹಳ ಯಶಸ್ವಿಯಾಗಿ ನಡೆಸಿದೆ. ಆದರೆ ಇಂದು ಪಾಕಿಸ್ತಾನದ ಪ್ರಧಾನಿ ಹಣಕ್ಕಾಗಿ ಪ್ರಪಂಚದ ಶ್ರೀಮಂತ ದೇಶಗಳ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಭಾರತ ಮಾಡಿದ ಸಾಧನೆಯನ್ನು ಪಾಕಿಸ್ತಾನಕ್ಕೆ ಸಾಧಿಸಲು ಏಕೆ ಸಾಧ್ಯವಾಗಲಿಲ್ಲ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

1990 ರಲ್ಲಿ ತಮ್ಮ ಸರ್ಕಾರ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳನ್ನು ಭಾರತ ಅನುಸರಿಸಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನಿಯಾದಾಗ ಭಾರತದ ವಿದೇಶಿ ವಿನಿಮಯ ಕೇವಲ ಒಂದು ಶತಕೋಟಿ ಡಾಲರ್‍ಗಳಷ್ಟಿತ್ತು. ಆದರೆ ಈಗ ಅದು 600 ಶತಕೋಟಿ ಡಾಲರ್‍ಗೆ ಏರಿದೆ. ಭಾರತ ಇಂದು ಎಲ್ಲಿಗೆ ತಲುಪಿದೆ?, ಪಾಕಿಸ್ತಾನ ಭಿಕ್ಷಾಟನೆಯಿಂದ ಎಲ್ಲಿದೆ ಎಂದು ಪ್ರಶ್ನಿಸಿದರು.

ಇದೇ ವೇಳೆ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ಮಾಜಿ ಐಎ ಮುಖ್ಯಸ್ಥ ಫೈಜ್ ಹಮೀದ್ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಮಿಯಾನ್ ಸಾಕಿಬ್ ನಿಸಾರ್ ಅವರು ಪಾಕಿಸ್ತಾನದ ಈ ಸ್ಥಿತಿಗೆ ಕಾರಣ ಎಂದು ನವಾಜ್ ಷರೀಫ್ ದೂರಿದ್ದಾರೆ.

ಮುಂಬರುವ ಚುನಾವಣೆಗಳಲ್ಲಿ ಪಕ್ಷದ ರಾಜಕೀಯ ಪ್ರಚಾರವನ್ನು ಮುನ್ನಡೆಸಲು ಷರೀಫ್ ಮೊದಲ ಬಾರಿಗೆ ಅಕ್ಟೋಬರ್ 21 ರಂದು ದೇಶಕ್ಕೆ ಹಿಂದಿರುಗುವುದಾಗಿ ಘೋಷಿಸಿದ್ದಾರೆ. ಯುಕೆಯಲ್ಲಿ ನಾಲ್ಕು ವರ್ಷಗಳ ಸ್ವಯಂ-ಘೋಷಿತ ಗಡಿಪಾರು ಕೊನೆಗೊಳ್ಳಲಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಲಿದೆ ಎಂದು ಷರೀಫ್ ಘೋಷಿಸಿದರು.

lokesh

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

14 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

14 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

14 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

14 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

14 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

15 hours ago