ಇಸ್ಲಾಮಾಬಾದ್ : ಭಾರತವು ಚಂದ್ರನನ್ನು ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬೇಸರ ವ್ಯಕ್ತಪಡಿಸಿದ್ದಾರೆ.
ವೀಡಿಯೋ ಲಿಂಕ್ ಮೂಲಕ ಲಾಹೋರ್ ನ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಭಾರತವು ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನು ಬಹಳ ಯಶಸ್ವಿಯಾಗಿ ನಡೆಸಿದೆ. ಆದರೆ ಇಂದು ಪಾಕಿಸ್ತಾನದ ಪ್ರಧಾನಿ ಹಣಕ್ಕಾಗಿ ಪ್ರಪಂಚದ ಶ್ರೀಮಂತ ದೇಶಗಳ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಭಾರತ ಮಾಡಿದ ಸಾಧನೆಯನ್ನು ಪಾಕಿಸ್ತಾನಕ್ಕೆ ಸಾಧಿಸಲು ಏಕೆ ಸಾಧ್ಯವಾಗಲಿಲ್ಲ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.
1990 ರಲ್ಲಿ ತಮ್ಮ ಸರ್ಕಾರ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳನ್ನು ಭಾರತ ಅನುಸರಿಸಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನಿಯಾದಾಗ ಭಾರತದ ವಿದೇಶಿ ವಿನಿಮಯ ಕೇವಲ ಒಂದು ಶತಕೋಟಿ ಡಾಲರ್ಗಳಷ್ಟಿತ್ತು. ಆದರೆ ಈಗ ಅದು 600 ಶತಕೋಟಿ ಡಾಲರ್ಗೆ ಏರಿದೆ. ಭಾರತ ಇಂದು ಎಲ್ಲಿಗೆ ತಲುಪಿದೆ?, ಪಾಕಿಸ್ತಾನ ಭಿಕ್ಷಾಟನೆಯಿಂದ ಎಲ್ಲಿದೆ ಎಂದು ಪ್ರಶ್ನಿಸಿದರು.
ಇದೇ ವೇಳೆ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ಮಾಜಿ ಐಎ ಮುಖ್ಯಸ್ಥ ಫೈಜ್ ಹಮೀದ್ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಮಿಯಾನ್ ಸಾಕಿಬ್ ನಿಸಾರ್ ಅವರು ಪಾಕಿಸ್ತಾನದ ಈ ಸ್ಥಿತಿಗೆ ಕಾರಣ ಎಂದು ನವಾಜ್ ಷರೀಫ್ ದೂರಿದ್ದಾರೆ.
ಮುಂಬರುವ ಚುನಾವಣೆಗಳಲ್ಲಿ ಪಕ್ಷದ ರಾಜಕೀಯ ಪ್ರಚಾರವನ್ನು ಮುನ್ನಡೆಸಲು ಷರೀಫ್ ಮೊದಲ ಬಾರಿಗೆ ಅಕ್ಟೋಬರ್ 21 ರಂದು ದೇಶಕ್ಕೆ ಹಿಂದಿರುಗುವುದಾಗಿ ಘೋಷಿಸಿದ್ದಾರೆ. ಯುಕೆಯಲ್ಲಿ ನಾಲ್ಕು ವರ್ಷಗಳ ಸ್ವಯಂ-ಘೋಷಿತ ಗಡಿಪಾರು ಕೊನೆಗೊಳ್ಳಲಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಲಿದೆ ಎಂದು ಷರೀಫ್ ಘೋಷಿಸಿದರು.
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…
ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…
ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…