BREAKING NEWS

ಭಾರತ ವಿರೋಧಿ ಪ್ರಚಾರಕ್ಕೆ ಖಲಿಸ್ತಾನ್ ಉಗ್ರರ ಜೊತೆ ಕೈ ಜೋಡಿಸಿದ ಪಾಕಿಸ್ತಾನ

ನವದೆಹಲಿ : ಭಾರತ ವಿರೋಧಿ ಪ್ರಚಾರಕ್ಕೆ ಸಂಚು ರೂಪಿಸಲು ಕೆನಡಾದಲ್ಲಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಏಜೆಂಟ್‍ಗಳು ಮತ್ತು ಖಲಿಸ್ತಾನ್ ಭಯೋತ್ಪಾದಕ ಗುಂಪುಗಳ ಮುಖ್ಯಸ್ಥರು ಇತ್ತೀಚೆಗೆ ವ್ಯಾಂಕೋವರ್‌ನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ.

ಇದೇ ವಾರ ಸಭೆ ನಡೆದಿದ್ದು, ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್‍ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನಿ ಸಂಘಟನೆಗಳ ಇತರ ಮುಖ್ಯಸ್ಥರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಭಾರತದ ವಿರುದ್ಧ ನಕಾರಾತ್ಮಕ ಪ್ರಚಾರ ಮಾಡಲು ತಿರ್ಮಾನಿಸಲಾಗಿದೆ. ಅಲ್ಲದೇ ಸಾಧ್ಯವಾದಷ್ಟು ಈ ಯೋಜನೆಯನ್ನು ಕಾರ್ಯಗತಗೊಳಿಸಲು ಸಂಘಟನೆಗಳು ಮುಂದಾಗಿವೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಪ್ಲಾನ್-ಕೆ ಎಂದು ಹೆಸರಿಸಲಾದ ಯೋಜನೆಯ ಭಾಗವಾಗಿ ಐಎಸ್‍ಐ ಕಳೆದ ಕೆಲವು ತಿಂಗಳುಗಳಿಂದ ಕೆನಡಾದಲ್ಲಿ ಖಲಿಸ್ತಾನ್ ಚಟುವಟಿಕೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಣವನ್ನು ನೀಡುತ್ತಿದೆ. ಈ ಹಣವನ್ನು ಪ್ರತಿಭಟನೆಗಳನ್ನು ನಡೆಸಲು ಜನರನ್ನು ಪ್ರಚೋದಿಸಲು ಮತ್ತು ಭಾರತ ವಿರೋಧಿ ಪ್ರಚಾರಕ್ಕಾಗಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ತಯಾರಿಸಲು ಬಳಸಲಾಗುತ್ತಿದೆ. ಅಲ್ಲದೇ ಸಂಘಟನೆಗಳಿಗೆ ಹೊಸಬರನ್ನು ಸೇರಿಸಿಕೊಳ್ಳಲು ಇದೇ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

20ಕ್ಕೂ ಹೆಚ್ಚು ಖಲಿಸ್ತಾನಿ ಮತ್ತು ದರೋಡೆಕೋರರು ಕೆನಡಾದಲ್ಲಿ ಅಡಗಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ದೇಶದ ಇತರ ಏಜೆನ್ಸಿಗಳು ಕೆನಡಾಕ್ಕೆ ಪರಸ್ಪರ ಕಾನೂನು ಸಹಾಯ ಕೇಳಿದ್ದವು. ಆದರೆ ಕೆನಡಾದ ತನಿಖಾ ಸಂಸ್ಥೆಗಳು ತನಿಖೆಗೆ ಪ್ರತಿಕ್ರಿಯಿಸಿಲ್ಲ ಎಂದು ತಿಳಿದು ಬಂದಿದೆ.

 

lokesh

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago