ನವದೆಹಲಿ : ಭಾರತ ವಿರೋಧಿ ಪ್ರಚಾರಕ್ಕೆ ಸಂಚು ರೂಪಿಸಲು ಕೆನಡಾದಲ್ಲಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಏಜೆಂಟ್ಗಳು ಮತ್ತು ಖಲಿಸ್ತಾನ್ ಭಯೋತ್ಪಾದಕ ಗುಂಪುಗಳ ಮುಖ್ಯಸ್ಥರು ಇತ್ತೀಚೆಗೆ ವ್ಯಾಂಕೋವರ್ನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ.
ಇದೇ ವಾರ ಸಭೆ ನಡೆದಿದ್ದು, ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನಿ ಸಂಘಟನೆಗಳ ಇತರ ಮುಖ್ಯಸ್ಥರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಭಾರತದ ವಿರುದ್ಧ ನಕಾರಾತ್ಮಕ ಪ್ರಚಾರ ಮಾಡಲು ತಿರ್ಮಾನಿಸಲಾಗಿದೆ. ಅಲ್ಲದೇ ಸಾಧ್ಯವಾದಷ್ಟು ಈ ಯೋಜನೆಯನ್ನು ಕಾರ್ಯಗತಗೊಳಿಸಲು ಸಂಘಟನೆಗಳು ಮುಂದಾಗಿವೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಪ್ಲಾನ್-ಕೆ ಎಂದು ಹೆಸರಿಸಲಾದ ಯೋಜನೆಯ ಭಾಗವಾಗಿ ಐಎಸ್ಐ ಕಳೆದ ಕೆಲವು ತಿಂಗಳುಗಳಿಂದ ಕೆನಡಾದಲ್ಲಿ ಖಲಿಸ್ತಾನ್ ಚಟುವಟಿಕೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಣವನ್ನು ನೀಡುತ್ತಿದೆ. ಈ ಹಣವನ್ನು ಪ್ರತಿಭಟನೆಗಳನ್ನು ನಡೆಸಲು ಜನರನ್ನು ಪ್ರಚೋದಿಸಲು ಮತ್ತು ಭಾರತ ವಿರೋಧಿ ಪ್ರಚಾರಕ್ಕಾಗಿ ಪೋಸ್ಟರ್ಗಳು ಮತ್ತು ಬ್ಯಾನರ್ಗಳನ್ನು ತಯಾರಿಸಲು ಬಳಸಲಾಗುತ್ತಿದೆ. ಅಲ್ಲದೇ ಸಂಘಟನೆಗಳಿಗೆ ಹೊಸಬರನ್ನು ಸೇರಿಸಿಕೊಳ್ಳಲು ಇದೇ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
20ಕ್ಕೂ ಹೆಚ್ಚು ಖಲಿಸ್ತಾನಿ ಮತ್ತು ದರೋಡೆಕೋರರು ಕೆನಡಾದಲ್ಲಿ ಅಡಗಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ದೇಶದ ಇತರ ಏಜೆನ್ಸಿಗಳು ಕೆನಡಾಕ್ಕೆ ಪರಸ್ಪರ ಕಾನೂನು ಸಹಾಯ ಕೇಳಿದ್ದವು. ಆದರೆ ಕೆನಡಾದ ತನಿಖಾ ಸಂಸ್ಥೆಗಳು ತನಿಖೆಗೆ ಪ್ರತಿಕ್ರಿಯಿಸಿಲ್ಲ ಎಂದು ತಿಳಿದು ಬಂದಿದೆ.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…