BREAKING NEWS

ಪಾಕಿಸ್ತಾನದ ಸಿಕ್ಸರ್ ರಹಿತ ಇನ್ನಿಂಗ್ಸ್: 191 ರನ್ ಗೆ ಆಲೌಟ್

ಅಹಮದಾಬಾದ್ : ಭಾರತದ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ 42.5 ಓವರ್‌ಗಳಲ್ಲಿ  ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಕೇವಲ 141 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್  ಟೂರ್ನಿಯ 12 ನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್‌ ಆಯ್ದುಕೊಂಡಿತು. ಇತ್ತ ಬ್ಯಾಟಿಂಗ್ ಗೆ ಬಂದ ಪಾಕಿಸ್ತಾನ ಆರಂಭಿಕ ಬ್ಯಾಟರ್ಸ್ ಆರಂಭಿಕ ಓವರ್ ಗಳಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ತೋರಿದರು.

8ನೇ ಓವರ್‌ನಲ್ಲಿ ಸಿರಾಜ್ ಬೌಲಿಂಗ್ ನಲ್ಲಿ ಅಬ್ದುಲ್ಲಾ ಶಫೀಕ್ ರನ್ನು ಎಲ್ ಬಿಡಬ್ಲ್ಯೂ ಮಾಡುವುದರೊಂದಿಗೆ ತಂಡಕ್ಕೆ ಆರಂಭಿಕ ಮುನ್ನಡೆ ತಂದಕೊಟ್ಟರು.  ಇತ್ತ ಇಮಾಮ್ ಉಲ್ ಹಕ್ 36 ರನ್ ಗಳಿಸಿರುವಾಗ ಹಾರ್ದಿಕ್ ಪಾಂಡ್ಯ ಬೌಲಿಂಗ್ ನಲ್ಲಿ ವಿಕೆಟ್ ಕೀಪರ್ ಕೆ ಎಲ್ ರಾಹುಲ್ ಗೆ ಕ್ಯಾಚ್ ನೀಡಿ ಔಟ್ ಆದರು. ಆರಂಭಿಕ ಬ್ಯಾಟರ್ ಗಳ ವಿಕೆಟ್ ಬೇಗ ಪತನವಾದ ನಂತರ ಜವಾಬ್ದಾರಿಯುತ ಆಟ ಆಡಿದ ನಾಯಕ ಬಾಬರ್ ಅಝಮ್ ಹಾಗೂ ರಿಜ್ವಾನ್ ಉತ್ತಮ ಜೊತೆಯಾಟ ನೀಡಿದರು.

ನಾಯಕ ಬಾಬರ್ ಅಝಮ್ 7 ಬೌಂಡರಿ ಸಹಿತ 50 ರನ್ ಗಳಿಸಿ ಸಿರಾಜ್ ಗೆ ಕ್ಲೀನ್ ಬೌಲ್ಡ್ ಆದರೆ, ಮುಹಮ್ಮದ್ ರಿಜ್ವಾನ್ 49 ರನ್ ಗೆ ಜಸ್ಪ್ರಿತ್ ಬೂಮ್ರ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಯಾವೊಬ್ಬ ಪಾಕ್ ಬ್ಯಾಟರ್ ಭಾರತದ ಆಕ್ರಮಣಕಾರಿ ಬೌಲಿಂಗ್ ನಲ್ಲಿ ಹೆಚ್ಚು ಹೊತ್ತು ನಿಲ್ಲಲಾಗಲಿಲ್ಲ.

ಕುಲದೀಪ್ ಯಾದವ್ ಒಂದೇ ಓವರ್ ನಲ್ಲಿ ಸೌದ್ ಶಕೀಲ್( 6)ಹಾಗೂ ಇಫ್ತಿಕಾರ್ ಅಹ್ಮದ್( 4) ವಿಕೆಟ್ ಕಬಳಿಸಿ ಪಾಕ್ ಬ್ಯಾಟಿಂಗ್ ಬಲ ಮುರಿದರು. ಶಾದಾಬ್ ಖಾನ್ ಮಹಮ್ಮದ್ ನವಾಝ್ 4, ಹಸನ್ ಅಲಿ 12 ರನ್ ಗಳಿಸಿ ಪೆವಿಲಿಯನ್ ಪರೇಡ್ ಗೆ ಸಾಥ್ ನೀಡಿದರು. ಹಾರಿಸ್ 2 ರನ್ ಗಳಿಸಿ ಎಲ್ ಬಿ ಡಬ್ಲ್ಯೂ ಆದರು. ಶಾಹಿನ್ ಅಫ್ರಿದಿ 2 ರನ್ ಗಳಿಸಿದರು.

ಭಾರತ ತಂಡದ ಪರ ಜಸ್ಪ್ರಿತ್ ಬೂಮ್ರ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು.

andolanait

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

3 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

3 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

3 hours ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

3 hours ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

3 hours ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

15 hours ago