BREAKING NEWS

ಪಾಕಿಸ್ತಾನದ ಸಿಕ್ಸರ್ ರಹಿತ ಇನ್ನಿಂಗ್ಸ್: 191 ರನ್ ಗೆ ಆಲೌಟ್

ಅಹಮದಾಬಾದ್ : ಭಾರತದ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ 42.5 ಓವರ್‌ಗಳಲ್ಲಿ  ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಕೇವಲ 141 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್  ಟೂರ್ನಿಯ 12 ನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್‌ ಆಯ್ದುಕೊಂಡಿತು. ಇತ್ತ ಬ್ಯಾಟಿಂಗ್ ಗೆ ಬಂದ ಪಾಕಿಸ್ತಾನ ಆರಂಭಿಕ ಬ್ಯಾಟರ್ಸ್ ಆರಂಭಿಕ ಓವರ್ ಗಳಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ತೋರಿದರು.

8ನೇ ಓವರ್‌ನಲ್ಲಿ ಸಿರಾಜ್ ಬೌಲಿಂಗ್ ನಲ್ಲಿ ಅಬ್ದುಲ್ಲಾ ಶಫೀಕ್ ರನ್ನು ಎಲ್ ಬಿಡಬ್ಲ್ಯೂ ಮಾಡುವುದರೊಂದಿಗೆ ತಂಡಕ್ಕೆ ಆರಂಭಿಕ ಮುನ್ನಡೆ ತಂದಕೊಟ್ಟರು.  ಇತ್ತ ಇಮಾಮ್ ಉಲ್ ಹಕ್ 36 ರನ್ ಗಳಿಸಿರುವಾಗ ಹಾರ್ದಿಕ್ ಪಾಂಡ್ಯ ಬೌಲಿಂಗ್ ನಲ್ಲಿ ವಿಕೆಟ್ ಕೀಪರ್ ಕೆ ಎಲ್ ರಾಹುಲ್ ಗೆ ಕ್ಯಾಚ್ ನೀಡಿ ಔಟ್ ಆದರು. ಆರಂಭಿಕ ಬ್ಯಾಟರ್ ಗಳ ವಿಕೆಟ್ ಬೇಗ ಪತನವಾದ ನಂತರ ಜವಾಬ್ದಾರಿಯುತ ಆಟ ಆಡಿದ ನಾಯಕ ಬಾಬರ್ ಅಝಮ್ ಹಾಗೂ ರಿಜ್ವಾನ್ ಉತ್ತಮ ಜೊತೆಯಾಟ ನೀಡಿದರು.

ನಾಯಕ ಬಾಬರ್ ಅಝಮ್ 7 ಬೌಂಡರಿ ಸಹಿತ 50 ರನ್ ಗಳಿಸಿ ಸಿರಾಜ್ ಗೆ ಕ್ಲೀನ್ ಬೌಲ್ಡ್ ಆದರೆ, ಮುಹಮ್ಮದ್ ರಿಜ್ವಾನ್ 49 ರನ್ ಗೆ ಜಸ್ಪ್ರಿತ್ ಬೂಮ್ರ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಯಾವೊಬ್ಬ ಪಾಕ್ ಬ್ಯಾಟರ್ ಭಾರತದ ಆಕ್ರಮಣಕಾರಿ ಬೌಲಿಂಗ್ ನಲ್ಲಿ ಹೆಚ್ಚು ಹೊತ್ತು ನಿಲ್ಲಲಾಗಲಿಲ್ಲ.

ಕುಲದೀಪ್ ಯಾದವ್ ಒಂದೇ ಓವರ್ ನಲ್ಲಿ ಸೌದ್ ಶಕೀಲ್( 6)ಹಾಗೂ ಇಫ್ತಿಕಾರ್ ಅಹ್ಮದ್( 4) ವಿಕೆಟ್ ಕಬಳಿಸಿ ಪಾಕ್ ಬ್ಯಾಟಿಂಗ್ ಬಲ ಮುರಿದರು. ಶಾದಾಬ್ ಖಾನ್ ಮಹಮ್ಮದ್ ನವಾಝ್ 4, ಹಸನ್ ಅಲಿ 12 ರನ್ ಗಳಿಸಿ ಪೆವಿಲಿಯನ್ ಪರೇಡ್ ಗೆ ಸಾಥ್ ನೀಡಿದರು. ಹಾರಿಸ್ 2 ರನ್ ಗಳಿಸಿ ಎಲ್ ಬಿ ಡಬ್ಲ್ಯೂ ಆದರು. ಶಾಹಿನ್ ಅಫ್ರಿದಿ 2 ರನ್ ಗಳಿಸಿದರು.

ಭಾರತ ತಂಡದ ಪರ ಜಸ್ಪ್ರಿತ್ ಬೂಮ್ರ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago