BREAKING NEWS

ಪಾಂಡವಪುರ: ಕೊಟ್ಟಿಗೆಯಲ್ಲಿದ್ದ ಮೇಕೆಗಳ ಮೇಲೆ ಚಿರತೆ ಹಿಂಡು ದಾಳಿ

6 ಮೇಕೆಗಳನ್ನು ಸಾಯಿಸಿ, ನಾಲ್ಕನ್ನು ಹೊತ್ತೊಯ್ದ ಚಿರತೆಗಳು, ತಾಲ್ಲೂಕಿನಲ್ಲಿ ಮುಂದುವರಿದ ಚಿರತೆ ಹಾವಳಿ

ಪಾಂಡವಪುರ: ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳ ಹಿಂಡು ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ಗಿರಿಯಾರಹಳ್ಳಿ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.

ಗ್ರಾಮದ ನಾಗೇಗೌಡ ಎಂಬವರ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳು ಹೊತ್ತೊಯ್ದಿವೆ. ಮನೆಯ ಹಿಂದಿನ ಕೊಟ್ಟಿಗೆಯಲ್ಲಿ 20 ಮೇಕೆಗಳನ್ನು ಸಾಕಿದ್ದರು. ಭಾನುವಾರ ಮಧ್ಯರಾತ್ರಿ ಕೊಟ್ಟಿಗೆಗೆ ಮರ‍್ನಾಲ್ಕು ಚಿರತೆಗಳು ಒಟ್ಟಿಗೆ ದಾಳಿ ಮಾಡಿ  ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿವೆ.

ಸ್ಥಳಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೂಕ್ತ ಕ್ರಮವಹಿಸಿ ಮೇಕೆ ಮಾಲೀಕರಾದ ನಾಗೇಗೌಡ ಅವರಿಗೆ ಸೂಕ್ತ ಪರಿಹಾರ ಸೇರಿದಂತೆ ಗ್ರಾಮದಲ್ಲಿರುವ ಚಿರತೆಗಳನ್ನು ಸೆರೆ ಹಿಡಿಯಲು ಬೋನುಗಳನ್ನು ಅಳವಡಿಸುವಂತೆ ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಭಯಭೀತರಾದ ಗ್ರಾಮಸ್ಥರು:

ಒಟ್ಟಿಗೆ ಮೂರ‍್ನಾಲ್ಕು ಚಿರತೆ ದಾಳಿ ಮಾಡಿ ಆರು ಮೇಕೆಗಳನ್ನು ಸಾಯಿಸಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಿಂದೆಂದೂ ಇಂತಹ ಪ್ರಕರಣಗಳು ನಡೆದಿರಲಿಲ್ಲ. ಆದರೆ, ಚಿರತೆಗಳು ಸುಮಾರು 16 ಮೇಕೆಗಳನ್ನು ಸಾಯಿಸಿರುವುದರಿಂದ ಎಷ್ಟು ಚಿರತೆಗಳು ದಾಳಿ ಮಾಡಿರಬಹುದು ಎಂಬುದೇ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

lokesh

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago