ಪ್ರಾತಿನಿಧಿಕ ಚಿತ್ರ
6 ಮೇಕೆಗಳನ್ನು ಸಾಯಿಸಿ, ನಾಲ್ಕನ್ನು ಹೊತ್ತೊಯ್ದ ಚಿರತೆಗಳು, ತಾಲ್ಲೂಕಿನಲ್ಲಿ ಮುಂದುವರಿದ ಚಿರತೆ ಹಾವಳಿ
ಪಾಂಡವಪುರ: ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳ ಹಿಂಡು ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ಗಿರಿಯಾರಹಳ್ಳಿ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.
ಗ್ರಾಮದ ನಾಗೇಗೌಡ ಎಂಬವರ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳು ಹೊತ್ತೊಯ್ದಿವೆ. ಮನೆಯ ಹಿಂದಿನ ಕೊಟ್ಟಿಗೆಯಲ್ಲಿ 20 ಮೇಕೆಗಳನ್ನು ಸಾಕಿದ್ದರು. ಭಾನುವಾರ ಮಧ್ಯರಾತ್ರಿ ಕೊಟ್ಟಿಗೆಗೆ ಮರ್ನಾಲ್ಕು ಚಿರತೆಗಳು ಒಟ್ಟಿಗೆ ದಾಳಿ ಮಾಡಿ ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿವೆ.
ಸ್ಥಳಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೂಕ್ತ ಕ್ರಮವಹಿಸಿ ಮೇಕೆ ಮಾಲೀಕರಾದ ನಾಗೇಗೌಡ ಅವರಿಗೆ ಸೂಕ್ತ ಪರಿಹಾರ ಸೇರಿದಂತೆ ಗ್ರಾಮದಲ್ಲಿರುವ ಚಿರತೆಗಳನ್ನು ಸೆರೆ ಹಿಡಿಯಲು ಬೋನುಗಳನ್ನು ಅಳವಡಿಸುವಂತೆ ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಭಯಭೀತರಾದ ಗ್ರಾಮಸ್ಥರು:
ಒಟ್ಟಿಗೆ ಮೂರ್ನಾಲ್ಕು ಚಿರತೆ ದಾಳಿ ಮಾಡಿ ಆರು ಮೇಕೆಗಳನ್ನು ಸಾಯಿಸಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಿಂದೆಂದೂ ಇಂತಹ ಪ್ರಕರಣಗಳು ನಡೆದಿರಲಿಲ್ಲ. ಆದರೆ, ಚಿರತೆಗಳು ಸುಮಾರು 16 ಮೇಕೆಗಳನ್ನು ಸಾಯಿಸಿರುವುದರಿಂದ ಎಷ್ಟು ಚಿರತೆಗಳು ದಾಳಿ ಮಾಡಿರಬಹುದು ಎಂಬುದೇ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…