BREAKING NEWS

ಪಾಂಡವಪುರ: ಕೊಟ್ಟಿಗೆಯಲ್ಲಿದ್ದ ಮೇಕೆಗಳ ಮೇಲೆ ಚಿರತೆ ಹಿಂಡು ದಾಳಿ

6 ಮೇಕೆಗಳನ್ನು ಸಾಯಿಸಿ, ನಾಲ್ಕನ್ನು ಹೊತ್ತೊಯ್ದ ಚಿರತೆಗಳು, ತಾಲ್ಲೂಕಿನಲ್ಲಿ ಮುಂದುವರಿದ ಚಿರತೆ ಹಾವಳಿ

ಪಾಂಡವಪುರ: ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳ ಹಿಂಡು ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ಗಿರಿಯಾರಹಳ್ಳಿ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.

ಗ್ರಾಮದ ನಾಗೇಗೌಡ ಎಂಬವರ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳು ಹೊತ್ತೊಯ್ದಿವೆ. ಮನೆಯ ಹಿಂದಿನ ಕೊಟ್ಟಿಗೆಯಲ್ಲಿ 20 ಮೇಕೆಗಳನ್ನು ಸಾಕಿದ್ದರು. ಭಾನುವಾರ ಮಧ್ಯರಾತ್ರಿ ಕೊಟ್ಟಿಗೆಗೆ ಮರ‍್ನಾಲ್ಕು ಚಿರತೆಗಳು ಒಟ್ಟಿಗೆ ದಾಳಿ ಮಾಡಿ  ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿವೆ.

ಸ್ಥಳಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೂಕ್ತ ಕ್ರಮವಹಿಸಿ ಮೇಕೆ ಮಾಲೀಕರಾದ ನಾಗೇಗೌಡ ಅವರಿಗೆ ಸೂಕ್ತ ಪರಿಹಾರ ಸೇರಿದಂತೆ ಗ್ರಾಮದಲ್ಲಿರುವ ಚಿರತೆಗಳನ್ನು ಸೆರೆ ಹಿಡಿಯಲು ಬೋನುಗಳನ್ನು ಅಳವಡಿಸುವಂತೆ ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಭಯಭೀತರಾದ ಗ್ರಾಮಸ್ಥರು:

ಒಟ್ಟಿಗೆ ಮೂರ‍್ನಾಲ್ಕು ಚಿರತೆ ದಾಳಿ ಮಾಡಿ ಆರು ಮೇಕೆಗಳನ್ನು ಸಾಯಿಸಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಿಂದೆಂದೂ ಇಂತಹ ಪ್ರಕರಣಗಳು ನಡೆದಿರಲಿಲ್ಲ. ಆದರೆ, ಚಿರತೆಗಳು ಸುಮಾರು 16 ಮೇಕೆಗಳನ್ನು ಸಾಯಿಸಿರುವುದರಿಂದ ಎಷ್ಟು ಚಿರತೆಗಳು ದಾಳಿ ಮಾಡಿರಬಹುದು ಎಂಬುದೇ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

lokesh

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

9 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

23 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

23 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

23 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

23 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

23 hours ago