ಪ್ರಾತಿನಿಧಿಕ ಚಿತ್ರ
6 ಮೇಕೆಗಳನ್ನು ಸಾಯಿಸಿ, ನಾಲ್ಕನ್ನು ಹೊತ್ತೊಯ್ದ ಚಿರತೆಗಳು, ತಾಲ್ಲೂಕಿನಲ್ಲಿ ಮುಂದುವರಿದ ಚಿರತೆ ಹಾವಳಿ
ಪಾಂಡವಪುರ: ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳ ಹಿಂಡು ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ಗಿರಿಯಾರಹಳ್ಳಿ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.
ಗ್ರಾಮದ ನಾಗೇಗೌಡ ಎಂಬವರ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳು ಹೊತ್ತೊಯ್ದಿವೆ. ಮನೆಯ ಹಿಂದಿನ ಕೊಟ್ಟಿಗೆಯಲ್ಲಿ 20 ಮೇಕೆಗಳನ್ನು ಸಾಕಿದ್ದರು. ಭಾನುವಾರ ಮಧ್ಯರಾತ್ರಿ ಕೊಟ್ಟಿಗೆಗೆ ಮರ್ನಾಲ್ಕು ಚಿರತೆಗಳು ಒಟ್ಟಿಗೆ ದಾಳಿ ಮಾಡಿ ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿವೆ.
ಸ್ಥಳಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೂಕ್ತ ಕ್ರಮವಹಿಸಿ ಮೇಕೆ ಮಾಲೀಕರಾದ ನಾಗೇಗೌಡ ಅವರಿಗೆ ಸೂಕ್ತ ಪರಿಹಾರ ಸೇರಿದಂತೆ ಗ್ರಾಮದಲ್ಲಿರುವ ಚಿರತೆಗಳನ್ನು ಸೆರೆ ಹಿಡಿಯಲು ಬೋನುಗಳನ್ನು ಅಳವಡಿಸುವಂತೆ ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಭಯಭೀತರಾದ ಗ್ರಾಮಸ್ಥರು:
ಒಟ್ಟಿಗೆ ಮೂರ್ನಾಲ್ಕು ಚಿರತೆ ದಾಳಿ ಮಾಡಿ ಆರು ಮೇಕೆಗಳನ್ನು ಸಾಯಿಸಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಿಂದೆಂದೂ ಇಂತಹ ಪ್ರಕರಣಗಳು ನಡೆದಿರಲಿಲ್ಲ. ಆದರೆ, ಚಿರತೆಗಳು ಸುಮಾರು 16 ಮೇಕೆಗಳನ್ನು ಸಾಯಿಸಿರುವುದರಿಂದ ಎಷ್ಟು ಚಿರತೆಗಳು ದಾಳಿ ಮಾಡಿರಬಹುದು ಎಂಬುದೇ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…