BREAKING NEWS

ಮುಂಬೈಗೆ ನೂತನ ಸಾರಥಿಯಾಗಿ ನೇಮಕಗೊಂಡ ಪಾಂಡ್ಯ

ನವದೆಹಲಿ: ಸತತ 10 ವರ್ಷಗಳ ಕಾಲ ನಿರಂತರವಾಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕರಾಗಿದ್ದ ರೋಹಿತ್‌ ಶರ್ಮಾ ಅವರ ನಾಯಕತ್ವ ಕೊನೆಗಾಣಿಸಿ, ಎಲ್ಲರಲ್ಲಿಯೂ ಅಚ್ಚರಿಯಂತೆ ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024 ಸೀಸನ್‌ಗೆ ಮುಂಬೈ ಇಂಡಿಯನ್ಸ್ ನಾಯಕರಾಗಿ ನೇಮಕಮಾಡಿದ್ದಾರೆ.

2022 ರಲ್ಲಿ ಗುಜರಾತ್‌ ತಂಡಕ್ಕೆ ಸೇರ್ಪಡೆಗೊಂಡ ಹಾರ್ದಿಕ್‌ ಪಾಂಡ್ಯ ಮೊದಲ ವರ್ಷದಲ್ಲಿಯೇ ಗುಜರಾತ್‌ ತಂಡವನ್ನು ಚಾಂಪಿಯನ್‌ ಮಾಡಿದ್ದರು. ಈ ವರ್ಷ ಡಿಸೆಂಬರ್‌ 19 ರಂದು ನಡೆಯಲಿರುವ ಮಿನಿ ಹರಾಜಿಗು ಮುನ್ನಾ ಮುಂಬೈ ಇಂಡಿಯನ್ಸ್‌ ಟ್ರೇಡ್‌ ಮೂಲಕ ಹಾರ್ದಿಕ್‌ರನ್ನು ಖರೀದಿಸಿತ್ತು. ಈಗ ಅಚ್ಚರಿಯಂತೆ ರೋಹಿತ್‌ ಬದಲಿಗೆ ನಾಯಕನಾಗಿ ಪಾಂಡ್ಯ ನೇಮಕಗೊಂಡಿದ್ದಾರೆ.

ಮುಂಬರುವ 2024 ರ ಋತುವಿಗಾಗಿ ಮುಂಬೈ ಇಂಡಿಯನ್ಸ್ ಇಂದು ಮಹತ್ವದ ನಾಯಕತ್ವ ಬದಲಾವಣೆಯ ಬಗ್ಗೆ ಘೋಷಿಸಿದೆ. “ಹೆಸರಾಂತ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ನ ನಾಯಕನಾಗಿ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ, ಅದರೆ ಸುದೀರ್ಘ ಸೇವೆಯ ನಂತರ, ಅತ್ಯಂತ ಯಶಸ್ವಿ ಮತ್ತು ಪ್ರೀತಿಯ ನಾಯಕರಲ್ಲಿ ಒಬ್ಬರಾದ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿದ್ದಾರೆ ಎಂದು ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಪರಿವರ್ತನೆಯ ಕುರಿತು ಮುಂಬೈ ಇಂಡಿಯನ್ಸ್‌ನ ಗ್ಲೋಬಲ್ ಹೆಡ್ ಆಫ್ ಪರ್ಫಾರ್ಮೆನ್ಸ್ ಮಹೇಲಾ ಜಯವರ್ಧನೆ ಪ್ರತಿಕ್ರಿಯಿಸುತ್ತಾ, “ಇದು ಪರಂಪರೆಯ ನಿರ್ಮಾಣದ ಭಾಗವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಮುಂಬೈ ತತ್ವಕ್ಕೆ ಬದ್ಧವಾಗಿದೆ. ಭವಿಷ್ಯಕ್ಕಾಗಿ ತಂಡವನ್ನು ಬಲಪಡಿಸುವತ್ತ ಯಾವಾಗಲೂ ಕಣ್ಣಿಟ್ಟಿರುವ ರೋಹಿತ್‌ಗೆ ರಿಕಿ, ಈ ತತ್ವವನ್ನು ಗಮನದಲ್ಲಿಟ್ಟುಕೊಂಡು ಹಾರ್ದಿಕ್ ಪಾಂಡ್ಯ IPL 2024 ಋತುವಿಗಾಗಿ ಮುಂಬೈ ಇಂಡಿಯನ್ಸ್‌ನ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವಕ್ಕಾಗಿ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ. 2013 ರಿಂದ ಮುಂಬೈ ಇಂಡಿಯನ್ಸ್‌ನ ನಾಯಕನಾಗಿ ಅವರ ಅಧಿಕಾರಾವಧಿಯು ಅಸಾಮಾನ್ಯವಾದುದು. ಅವರ ನಾಯಕತ್ವವು ತಂಡಕ್ಕೆ ಅಪ್ರತಿಮ ಯಶಸ್ಸನ್ನು ತಂದುಕೊಟ್ಟಿದೆ ಆದರೆ ಐಪಿಎಲ್ ಇತಿಹಾಸದಲ್ಲಿ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿ ಅವರ ಸ್ಥಾನವನ್ನು ಗಟ್ಟಿಗೊಳಿಸಿದೆ ಎಂದು ಅವರು ಹೇಳಿದ್ದಾರೆ.

ನಾವು ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ನ ನೂತನ ನಾಯಕರನ್ನಾಗಿ ಸ್ವಾಗತಿಸುತ್ತೇವೆ ಮತ್ತು ಅವರಿಗೆ ಶುಭ ಹಾರೈಸುತ್ತೇವೆ ಎಂದು ಇನ್ಸ್ಟಾಗ್ರಾಂ ನಲ್ಲಿ ಬರೆದುಕೊಂಡಿದ್ದಾರೆ.

andolanait

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

5 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

5 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

5 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

5 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

5 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

5 hours ago