BREAKING NEWS

ಮುಂಬೈಗೆ ನೂತನ ಸಾರಥಿಯಾಗಿ ನೇಮಕಗೊಂಡ ಪಾಂಡ್ಯ

ನವದೆಹಲಿ: ಸತತ 10 ವರ್ಷಗಳ ಕಾಲ ನಿರಂತರವಾಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕರಾಗಿದ್ದ ರೋಹಿತ್‌ ಶರ್ಮಾ ಅವರ ನಾಯಕತ್ವ ಕೊನೆಗಾಣಿಸಿ, ಎಲ್ಲರಲ್ಲಿಯೂ ಅಚ್ಚರಿಯಂತೆ ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024 ಸೀಸನ್‌ಗೆ ಮುಂಬೈ ಇಂಡಿಯನ್ಸ್ ನಾಯಕರಾಗಿ ನೇಮಕಮಾಡಿದ್ದಾರೆ.

2022 ರಲ್ಲಿ ಗುಜರಾತ್‌ ತಂಡಕ್ಕೆ ಸೇರ್ಪಡೆಗೊಂಡ ಹಾರ್ದಿಕ್‌ ಪಾಂಡ್ಯ ಮೊದಲ ವರ್ಷದಲ್ಲಿಯೇ ಗುಜರಾತ್‌ ತಂಡವನ್ನು ಚಾಂಪಿಯನ್‌ ಮಾಡಿದ್ದರು. ಈ ವರ್ಷ ಡಿಸೆಂಬರ್‌ 19 ರಂದು ನಡೆಯಲಿರುವ ಮಿನಿ ಹರಾಜಿಗು ಮುನ್ನಾ ಮುಂಬೈ ಇಂಡಿಯನ್ಸ್‌ ಟ್ರೇಡ್‌ ಮೂಲಕ ಹಾರ್ದಿಕ್‌ರನ್ನು ಖರೀದಿಸಿತ್ತು. ಈಗ ಅಚ್ಚರಿಯಂತೆ ರೋಹಿತ್‌ ಬದಲಿಗೆ ನಾಯಕನಾಗಿ ಪಾಂಡ್ಯ ನೇಮಕಗೊಂಡಿದ್ದಾರೆ.

ಮುಂಬರುವ 2024 ರ ಋತುವಿಗಾಗಿ ಮುಂಬೈ ಇಂಡಿಯನ್ಸ್ ಇಂದು ಮಹತ್ವದ ನಾಯಕತ್ವ ಬದಲಾವಣೆಯ ಬಗ್ಗೆ ಘೋಷಿಸಿದೆ. “ಹೆಸರಾಂತ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ನ ನಾಯಕನಾಗಿ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ, ಅದರೆ ಸುದೀರ್ಘ ಸೇವೆಯ ನಂತರ, ಅತ್ಯಂತ ಯಶಸ್ವಿ ಮತ್ತು ಪ್ರೀತಿಯ ನಾಯಕರಲ್ಲಿ ಒಬ್ಬರಾದ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿದ್ದಾರೆ ಎಂದು ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಪರಿವರ್ತನೆಯ ಕುರಿತು ಮುಂಬೈ ಇಂಡಿಯನ್ಸ್‌ನ ಗ್ಲೋಬಲ್ ಹೆಡ್ ಆಫ್ ಪರ್ಫಾರ್ಮೆನ್ಸ್ ಮಹೇಲಾ ಜಯವರ್ಧನೆ ಪ್ರತಿಕ್ರಿಯಿಸುತ್ತಾ, “ಇದು ಪರಂಪರೆಯ ನಿರ್ಮಾಣದ ಭಾಗವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಮುಂಬೈ ತತ್ವಕ್ಕೆ ಬದ್ಧವಾಗಿದೆ. ಭವಿಷ್ಯಕ್ಕಾಗಿ ತಂಡವನ್ನು ಬಲಪಡಿಸುವತ್ತ ಯಾವಾಗಲೂ ಕಣ್ಣಿಟ್ಟಿರುವ ರೋಹಿತ್‌ಗೆ ರಿಕಿ, ಈ ತತ್ವವನ್ನು ಗಮನದಲ್ಲಿಟ್ಟುಕೊಂಡು ಹಾರ್ದಿಕ್ ಪಾಂಡ್ಯ IPL 2024 ಋತುವಿಗಾಗಿ ಮುಂಬೈ ಇಂಡಿಯನ್ಸ್‌ನ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವಕ್ಕಾಗಿ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ. 2013 ರಿಂದ ಮುಂಬೈ ಇಂಡಿಯನ್ಸ್‌ನ ನಾಯಕನಾಗಿ ಅವರ ಅಧಿಕಾರಾವಧಿಯು ಅಸಾಮಾನ್ಯವಾದುದು. ಅವರ ನಾಯಕತ್ವವು ತಂಡಕ್ಕೆ ಅಪ್ರತಿಮ ಯಶಸ್ಸನ್ನು ತಂದುಕೊಟ್ಟಿದೆ ಆದರೆ ಐಪಿಎಲ್ ಇತಿಹಾಸದಲ್ಲಿ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿ ಅವರ ಸ್ಥಾನವನ್ನು ಗಟ್ಟಿಗೊಳಿಸಿದೆ ಎಂದು ಅವರು ಹೇಳಿದ್ದಾರೆ.

ನಾವು ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ನ ನೂತನ ನಾಯಕರನ್ನಾಗಿ ಸ್ವಾಗತಿಸುತ್ತೇವೆ ಮತ್ತು ಅವರಿಗೆ ಶುಭ ಹಾರೈಸುತ್ತೇವೆ ಎಂದು ಇನ್ಸ್ಟಾಗ್ರಾಂ ನಲ್ಲಿ ಬರೆದುಕೊಂಡಿದ್ದಾರೆ.

andolanait

Recent Posts

ಆರ್‌ಬಿಐ ರೆಪೊ ದರ ಯಥಾಸ್ಥಿತಿ : ಹಣಕಾಸು ಸಮಿತಿ ನಿರ್ಣಯ

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…

2 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

1 hour ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

1 hour ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

2 hours ago

ಪರೀಕ್ಷಾ ಪೇ ಚರ್ಚಾ | ಇಂಟರ್‌ನೆಟ್‌ನಲ್ಲಿ ಸಮಯ ಕಳೆಯಬೇಡಿ : ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‍ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…

2 hours ago

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ವಿದ್ಯುತ್‌ ದರ ಏರಿಕೆ ಸಾಧ್ಯತೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…

2 hours ago