ನವದೆಹಲಿ: ಸತತ 10 ವರ್ಷಗಳ ಕಾಲ ನಿರಂತರವಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾ ಅವರ ನಾಯಕತ್ವ ಕೊನೆಗಾಣಿಸಿ, ಎಲ್ಲರಲ್ಲಿಯೂ ಅಚ್ಚರಿಯಂತೆ ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024 ಸೀಸನ್ಗೆ ಮುಂಬೈ ಇಂಡಿಯನ್ಸ್ ನಾಯಕರಾಗಿ ನೇಮಕಮಾಡಿದ್ದಾರೆ.
2022 ರಲ್ಲಿ ಗುಜರಾತ್ ತಂಡಕ್ಕೆ ಸೇರ್ಪಡೆಗೊಂಡ ಹಾರ್ದಿಕ್ ಪಾಂಡ್ಯ ಮೊದಲ ವರ್ಷದಲ್ಲಿಯೇ ಗುಜರಾತ್ ತಂಡವನ್ನು ಚಾಂಪಿಯನ್ ಮಾಡಿದ್ದರು. ಈ ವರ್ಷ ಡಿಸೆಂಬರ್ 19 ರಂದು ನಡೆಯಲಿರುವ ಮಿನಿ ಹರಾಜಿಗು ಮುನ್ನಾ ಮುಂಬೈ ಇಂಡಿಯನ್ಸ್ ಟ್ರೇಡ್ ಮೂಲಕ ಹಾರ್ದಿಕ್ರನ್ನು ಖರೀದಿಸಿತ್ತು. ಈಗ ಅಚ್ಚರಿಯಂತೆ ರೋಹಿತ್ ಬದಲಿಗೆ ನಾಯಕನಾಗಿ ಪಾಂಡ್ಯ ನೇಮಕಗೊಂಡಿದ್ದಾರೆ.
ಮುಂಬರುವ 2024 ರ ಋತುವಿಗಾಗಿ ಮುಂಬೈ ಇಂಡಿಯನ್ಸ್ ಇಂದು ಮಹತ್ವದ ನಾಯಕತ್ವ ಬದಲಾವಣೆಯ ಬಗ್ಗೆ ಘೋಷಿಸಿದೆ. “ಹೆಸರಾಂತ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ನ ನಾಯಕನಾಗಿ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ, ಅದರೆ ಸುದೀರ್ಘ ಸೇವೆಯ ನಂತರ, ಅತ್ಯಂತ ಯಶಸ್ವಿ ಮತ್ತು ಪ್ರೀತಿಯ ನಾಯಕರಲ್ಲಿ ಒಬ್ಬರಾದ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿದ್ದಾರೆ ಎಂದು ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಈ ಪರಿವರ್ತನೆಯ ಕುರಿತು ಮುಂಬೈ ಇಂಡಿಯನ್ಸ್ನ ಗ್ಲೋಬಲ್ ಹೆಡ್ ಆಫ್ ಪರ್ಫಾರ್ಮೆನ್ಸ್ ಮಹೇಲಾ ಜಯವರ್ಧನೆ ಪ್ರತಿಕ್ರಿಯಿಸುತ್ತಾ, “ಇದು ಪರಂಪರೆಯ ನಿರ್ಮಾಣದ ಭಾಗವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಮುಂಬೈ ತತ್ವಕ್ಕೆ ಬದ್ಧವಾಗಿದೆ. ಭವಿಷ್ಯಕ್ಕಾಗಿ ತಂಡವನ್ನು ಬಲಪಡಿಸುವತ್ತ ಯಾವಾಗಲೂ ಕಣ್ಣಿಟ್ಟಿರುವ ರೋಹಿತ್ಗೆ ರಿಕಿ, ಈ ತತ್ವವನ್ನು ಗಮನದಲ್ಲಿಟ್ಟುಕೊಂಡು ಹಾರ್ದಿಕ್ ಪಾಂಡ್ಯ IPL 2024 ಋತುವಿಗಾಗಿ ಮುಂಬೈ ಇಂಡಿಯನ್ಸ್ನ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವಕ್ಕಾಗಿ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ. 2013 ರಿಂದ ಮುಂಬೈ ಇಂಡಿಯನ್ಸ್ನ ನಾಯಕನಾಗಿ ಅವರ ಅಧಿಕಾರಾವಧಿಯು ಅಸಾಮಾನ್ಯವಾದುದು. ಅವರ ನಾಯಕತ್ವವು ತಂಡಕ್ಕೆ ಅಪ್ರತಿಮ ಯಶಸ್ಸನ್ನು ತಂದುಕೊಟ್ಟಿದೆ ಆದರೆ ಐಪಿಎಲ್ ಇತಿಹಾಸದಲ್ಲಿ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿ ಅವರ ಸ್ಥಾನವನ್ನು ಗಟ್ಟಿಗೊಳಿಸಿದೆ ಎಂದು ಅವರು ಹೇಳಿದ್ದಾರೆ.
ನಾವು ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ನ ನೂತನ ನಾಯಕರನ್ನಾಗಿ ಸ್ವಾಗತಿಸುತ್ತೇವೆ ಮತ್ತು ಅವರಿಗೆ ಶುಭ ಹಾರೈಸುತ್ತೇವೆ ಎಂದು ಇನ್ಸ್ಟಾಗ್ರಾಂ ನಲ್ಲಿ ಬರೆದುಕೊಂಡಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…