BREAKING NEWS

ಮುಂಬೈಗೆ ನೂತನ ಸಾರಥಿಯಾಗಿ ನೇಮಕಗೊಂಡ ಪಾಂಡ್ಯ

ನವದೆಹಲಿ: ಸತತ 10 ವರ್ಷಗಳ ಕಾಲ ನಿರಂತರವಾಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕರಾಗಿದ್ದ ರೋಹಿತ್‌ ಶರ್ಮಾ ಅವರ ನಾಯಕತ್ವ ಕೊನೆಗಾಣಿಸಿ, ಎಲ್ಲರಲ್ಲಿಯೂ ಅಚ್ಚರಿಯಂತೆ ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024 ಸೀಸನ್‌ಗೆ ಮುಂಬೈ ಇಂಡಿಯನ್ಸ್ ನಾಯಕರಾಗಿ ನೇಮಕಮಾಡಿದ್ದಾರೆ.

2022 ರಲ್ಲಿ ಗುಜರಾತ್‌ ತಂಡಕ್ಕೆ ಸೇರ್ಪಡೆಗೊಂಡ ಹಾರ್ದಿಕ್‌ ಪಾಂಡ್ಯ ಮೊದಲ ವರ್ಷದಲ್ಲಿಯೇ ಗುಜರಾತ್‌ ತಂಡವನ್ನು ಚಾಂಪಿಯನ್‌ ಮಾಡಿದ್ದರು. ಈ ವರ್ಷ ಡಿಸೆಂಬರ್‌ 19 ರಂದು ನಡೆಯಲಿರುವ ಮಿನಿ ಹರಾಜಿಗು ಮುನ್ನಾ ಮುಂಬೈ ಇಂಡಿಯನ್ಸ್‌ ಟ್ರೇಡ್‌ ಮೂಲಕ ಹಾರ್ದಿಕ್‌ರನ್ನು ಖರೀದಿಸಿತ್ತು. ಈಗ ಅಚ್ಚರಿಯಂತೆ ರೋಹಿತ್‌ ಬದಲಿಗೆ ನಾಯಕನಾಗಿ ಪಾಂಡ್ಯ ನೇಮಕಗೊಂಡಿದ್ದಾರೆ.

ಮುಂಬರುವ 2024 ರ ಋತುವಿಗಾಗಿ ಮುಂಬೈ ಇಂಡಿಯನ್ಸ್ ಇಂದು ಮಹತ್ವದ ನಾಯಕತ್ವ ಬದಲಾವಣೆಯ ಬಗ್ಗೆ ಘೋಷಿಸಿದೆ. “ಹೆಸರಾಂತ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ನ ನಾಯಕನಾಗಿ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ, ಅದರೆ ಸುದೀರ್ಘ ಸೇವೆಯ ನಂತರ, ಅತ್ಯಂತ ಯಶಸ್ವಿ ಮತ್ತು ಪ್ರೀತಿಯ ನಾಯಕರಲ್ಲಿ ಒಬ್ಬರಾದ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿದ್ದಾರೆ ಎಂದು ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಪರಿವರ್ತನೆಯ ಕುರಿತು ಮುಂಬೈ ಇಂಡಿಯನ್ಸ್‌ನ ಗ್ಲೋಬಲ್ ಹೆಡ್ ಆಫ್ ಪರ್ಫಾರ್ಮೆನ್ಸ್ ಮಹೇಲಾ ಜಯವರ್ಧನೆ ಪ್ರತಿಕ್ರಿಯಿಸುತ್ತಾ, “ಇದು ಪರಂಪರೆಯ ನಿರ್ಮಾಣದ ಭಾಗವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಮುಂಬೈ ತತ್ವಕ್ಕೆ ಬದ್ಧವಾಗಿದೆ. ಭವಿಷ್ಯಕ್ಕಾಗಿ ತಂಡವನ್ನು ಬಲಪಡಿಸುವತ್ತ ಯಾವಾಗಲೂ ಕಣ್ಣಿಟ್ಟಿರುವ ರೋಹಿತ್‌ಗೆ ರಿಕಿ, ಈ ತತ್ವವನ್ನು ಗಮನದಲ್ಲಿಟ್ಟುಕೊಂಡು ಹಾರ್ದಿಕ್ ಪಾಂಡ್ಯ IPL 2024 ಋತುವಿಗಾಗಿ ಮುಂಬೈ ಇಂಡಿಯನ್ಸ್‌ನ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವಕ್ಕಾಗಿ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ. 2013 ರಿಂದ ಮುಂಬೈ ಇಂಡಿಯನ್ಸ್‌ನ ನಾಯಕನಾಗಿ ಅವರ ಅಧಿಕಾರಾವಧಿಯು ಅಸಾಮಾನ್ಯವಾದುದು. ಅವರ ನಾಯಕತ್ವವು ತಂಡಕ್ಕೆ ಅಪ್ರತಿಮ ಯಶಸ್ಸನ್ನು ತಂದುಕೊಟ್ಟಿದೆ ಆದರೆ ಐಪಿಎಲ್ ಇತಿಹಾಸದಲ್ಲಿ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿ ಅವರ ಸ್ಥಾನವನ್ನು ಗಟ್ಟಿಗೊಳಿಸಿದೆ ಎಂದು ಅವರು ಹೇಳಿದ್ದಾರೆ.

ನಾವು ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ನ ನೂತನ ನಾಯಕರನ್ನಾಗಿ ಸ್ವಾಗತಿಸುತ್ತೇವೆ ಮತ್ತು ಅವರಿಗೆ ಶುಭ ಹಾರೈಸುತ್ತೇವೆ ಎಂದು ಇನ್ಸ್ಟಾಗ್ರಾಂ ನಲ್ಲಿ ಬರೆದುಕೊಂಡಿದ್ದಾರೆ.

andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

5 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

5 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

6 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

6 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

6 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

6 hours ago