BREAKING NEWS

ಮುಂಬೈಗೆ ನೂತನ ಸಾರಥಿಯಾಗಿ ನೇಮಕಗೊಂಡ ಪಾಂಡ್ಯ

ನವದೆಹಲಿ: ಸತತ 10 ವರ್ಷಗಳ ಕಾಲ ನಿರಂತರವಾಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕರಾಗಿದ್ದ ರೋಹಿತ್‌ ಶರ್ಮಾ ಅವರ ನಾಯಕತ್ವ ಕೊನೆಗಾಣಿಸಿ, ಎಲ್ಲರಲ್ಲಿಯೂ ಅಚ್ಚರಿಯಂತೆ ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024 ಸೀಸನ್‌ಗೆ ಮುಂಬೈ ಇಂಡಿಯನ್ಸ್ ನಾಯಕರಾಗಿ ನೇಮಕಮಾಡಿದ್ದಾರೆ.

2022 ರಲ್ಲಿ ಗುಜರಾತ್‌ ತಂಡಕ್ಕೆ ಸೇರ್ಪಡೆಗೊಂಡ ಹಾರ್ದಿಕ್‌ ಪಾಂಡ್ಯ ಮೊದಲ ವರ್ಷದಲ್ಲಿಯೇ ಗುಜರಾತ್‌ ತಂಡವನ್ನು ಚಾಂಪಿಯನ್‌ ಮಾಡಿದ್ದರು. ಈ ವರ್ಷ ಡಿಸೆಂಬರ್‌ 19 ರಂದು ನಡೆಯಲಿರುವ ಮಿನಿ ಹರಾಜಿಗು ಮುನ್ನಾ ಮುಂಬೈ ಇಂಡಿಯನ್ಸ್‌ ಟ್ರೇಡ್‌ ಮೂಲಕ ಹಾರ್ದಿಕ್‌ರನ್ನು ಖರೀದಿಸಿತ್ತು. ಈಗ ಅಚ್ಚರಿಯಂತೆ ರೋಹಿತ್‌ ಬದಲಿಗೆ ನಾಯಕನಾಗಿ ಪಾಂಡ್ಯ ನೇಮಕಗೊಂಡಿದ್ದಾರೆ.

ಮುಂಬರುವ 2024 ರ ಋತುವಿಗಾಗಿ ಮುಂಬೈ ಇಂಡಿಯನ್ಸ್ ಇಂದು ಮಹತ್ವದ ನಾಯಕತ್ವ ಬದಲಾವಣೆಯ ಬಗ್ಗೆ ಘೋಷಿಸಿದೆ. “ಹೆಸರಾಂತ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ನ ನಾಯಕನಾಗಿ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ, ಅದರೆ ಸುದೀರ್ಘ ಸೇವೆಯ ನಂತರ, ಅತ್ಯಂತ ಯಶಸ್ವಿ ಮತ್ತು ಪ್ರೀತಿಯ ನಾಯಕರಲ್ಲಿ ಒಬ್ಬರಾದ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿದ್ದಾರೆ ಎಂದು ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಪರಿವರ್ತನೆಯ ಕುರಿತು ಮುಂಬೈ ಇಂಡಿಯನ್ಸ್‌ನ ಗ್ಲೋಬಲ್ ಹೆಡ್ ಆಫ್ ಪರ್ಫಾರ್ಮೆನ್ಸ್ ಮಹೇಲಾ ಜಯವರ್ಧನೆ ಪ್ರತಿಕ್ರಿಯಿಸುತ್ತಾ, “ಇದು ಪರಂಪರೆಯ ನಿರ್ಮಾಣದ ಭಾಗವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಮುಂಬೈ ತತ್ವಕ್ಕೆ ಬದ್ಧವಾಗಿದೆ. ಭವಿಷ್ಯಕ್ಕಾಗಿ ತಂಡವನ್ನು ಬಲಪಡಿಸುವತ್ತ ಯಾವಾಗಲೂ ಕಣ್ಣಿಟ್ಟಿರುವ ರೋಹಿತ್‌ಗೆ ರಿಕಿ, ಈ ತತ್ವವನ್ನು ಗಮನದಲ್ಲಿಟ್ಟುಕೊಂಡು ಹಾರ್ದಿಕ್ ಪಾಂಡ್ಯ IPL 2024 ಋತುವಿಗಾಗಿ ಮುಂಬೈ ಇಂಡಿಯನ್ಸ್‌ನ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವಕ್ಕಾಗಿ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ. 2013 ರಿಂದ ಮುಂಬೈ ಇಂಡಿಯನ್ಸ್‌ನ ನಾಯಕನಾಗಿ ಅವರ ಅಧಿಕಾರಾವಧಿಯು ಅಸಾಮಾನ್ಯವಾದುದು. ಅವರ ನಾಯಕತ್ವವು ತಂಡಕ್ಕೆ ಅಪ್ರತಿಮ ಯಶಸ್ಸನ್ನು ತಂದುಕೊಟ್ಟಿದೆ ಆದರೆ ಐಪಿಎಲ್ ಇತಿಹಾಸದಲ್ಲಿ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿ ಅವರ ಸ್ಥಾನವನ್ನು ಗಟ್ಟಿಗೊಳಿಸಿದೆ ಎಂದು ಅವರು ಹೇಳಿದ್ದಾರೆ.

ನಾವು ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ನ ನೂತನ ನಾಯಕರನ್ನಾಗಿ ಸ್ವಾಗತಿಸುತ್ತೇವೆ ಮತ್ತು ಅವರಿಗೆ ಶುಭ ಹಾರೈಸುತ್ತೇವೆ ಎಂದು ಇನ್ಸ್ಟಾಗ್ರಾಂ ನಲ್ಲಿ ಬರೆದುಕೊಂಡಿದ್ದಾರೆ.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

7 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

8 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

8 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

9 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

9 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

9 hours ago