ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಲವಾರು ಕ್ಷೇತ್ರಗಳಲ್ಲಿ ಬದಲಾವಣೆಯನ್ನು ತರಲು ಬಯಸಿದೆ. ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ ಬೆನ್ನಲ್ಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಗಮನ ಹರಿಸಿದ ಸರ್ಕಾರ ಇದೀಗ ಶಾಲಾ ವಿದ್ಯಾರ್ಥಿಗಳ ಸಮವಸ್ತ್ರದ ಮೇಲೂ ಕಣ್ಣಿಟ್ಟಿದ್ದು, ಸಮವಸ್ತ್ರ ಬದಲಾವಣೆಗೆ ಚಿಂತನೆ ನಡೆಸಿದೆ.
ಭದ್ರತೆ ಮತ್ತು ಹಿತದೃಷ್ಟಿಯಿಂದ 1 ರಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಬದಲು ಪ್ಯಾಂಟ್ ಅಥವಾ ಚೂಡಿದಾರ ಸಮವಸ್ತ್ರ ಕಡ್ಡಾಯಗೊಳಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಸಾಧ್ಯವಾದರೆ ಶಾಲೆಗಳಲ್ಲಿ ಸೂಚಿಸಲಾದ ಸಮವಸ್ತ್ರದ ನಿಯಮಗಳು ಮತ್ತು ನಿಬಂಧನೆಗಳನ್ನು ಮರುಪರಿಶೀಲಿಸಿ ಮತ್ತು ಬಾಲಕಿಯರ ಒಟ್ಟಾರೆ ಅಭಿವೃದ್ಧಿಗಾಗಿ ಸಮವಸ್ತ್ರದ ನಿಯಮಗಳಲ್ಲಿ ಮಾರ್ಪಾಡು ಮಾಡಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೇಳಿದೆ.
ಇದರೊಂದಿಗೆ ಸ್ಕರ್ಟ್ ಧರಿಸುವ ಹುಡುಗಿಯರು ಎದುರಿಸುತ್ತಿರುವ ಅನಾನುಕೂಲತೆಗಳ ಕುರಿತು ಆಯೋಗಕ್ಕೆ ಪತ್ರ ಬರೆದ ನಂತರ ಶಿಫಾರಸು ಮಾಡಲಾಗಿದೆ. ಪತ್ರದಲ್ಲಿ ಹುಡುಗಿಯರು ನಾಚಿಕೆ ಸ್ವಭಾವದರಾಗಿದ್ದು, ಸಾಮಾನ್ಯವಾಗಿ ಸ್ಕರ್ಟ್ ಗಳನ್ನು ಧರಿಸುವುದರಿಂದ ಮುಜುಗರ ವ್ಯಕ್ತಪಡಿಸುತ್ತಾರೆ. ಪ್ರಯಾಣಿಸುವಾಗ, ಜನನಿಬಿಡ ಪ್ರದೇಶಗಳಲ್ಲಿ ತಿರುಗಾಡುವಾಗ, ಸೈಕ್ಲಿಂಗ್ ಅಥವಾ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಾಗ ಸ್ಕರ್ಟ್ ಧರಿಸುವುದು ಒಂದು ಅಡಚಣೆಯಾಗಿದೆ. ಇನ್ನು ಪತ್ರದಲ್ಲಿ ಲೈಂಗಿಕ ಕಿರುಕುಳದ ವರದಿಗಳೂ ಇವೆಯೆಂದು ಉಲ್ಲೇಖಿಸಿ, ಅವರ ಸಮವಸ್ತ್ರವನ್ನು ಚೂಡಿದಾರ್ ಅಥವಾ ಪ್ಯಾಂಟ್ ಗೆ ಬದಲಾಯಿಸುವಂತೆ ಸೂಚಿಸಿದೆ.
ಅಂದಹಾಗೆ ಕರ್ನಾಟಕ ಶಿಕ್ಷಣ ಕಾಯ್ದೆ,1983 ರ ಪ್ರಕಾರ, ಶೈಕ್ಷಣಿಕ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಶಿಫಾರಸು ಮಾಡಲು ಸ್ವತಂತ್ರವಾಗಿವೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಗಂಡುಮಕ್ಕಳಿಗೆ ಶರ್ಟ್, ಚಡ್ಡಿ ಅಥವಾ ಪ್ಯಾಂಟ್ಗಳನ್ನು ಸೂಚಿಸಿದರೆ, ಹೆಚ್ಚಿನ ಖಾಸಗಿ ಶಾಲಾ ಆಡಳಿತಗಳು ಹುಡುಗಿಯರಿಗೆ ಸ್ಕರ್ಟ್ಗಳನ್ನು ಸೂಚಿಸಿದೆ. ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಚೂಡಿದಾರಗಳನ್ನು ಧರಿಸುವುದು ಕಡ್ಡಾಯವಾಗಿದೆ. ಎಲ್ಲಾ ಸರಕಾರಿ, ಅನುದಾನಿತ ಮತ್ತು ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಧರಿಸುವುದು ಸಮವಸ್ತ್ರದ ಒಂದು ಭಾಗವಾಗಿದೆ. ಆದರೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮೇಲಿನ ಸಮಸ್ಯೆಗಳನ್ನು ಉಲ್ಲೇಖಿಸಿ ಪತ್ರ ಬರೆದಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಕೆಎಸ್ಸಿಪಿಸಿಆರ್ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು “ಸ್ಕರ್ಟ್ಗಿಂತ ಪ್ಯಾಂಟ್ ಅಥವಾ ಚೂಡಿದಾರ ಧರಿಸುವುದು ಉತ್ತಮ ಎಂಬ ಅಭಿಪ್ರಾಯವನ್ನು ಹೆಚ್ಚಿನ ವಿದ್ಯಾರ್ಥಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದ್ದರಿಂದ, ನಾವು ಡಿಎಸ್ಇಎಲ್ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ ಮತ್ತು ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…