BREAKING NEWS

ಶಾಲಾ ವಿದ್ಯಾರ್ಥಿನಿಯರಿಗೆ ಸ್ಕರ್ಟ್​​​ ಬದಲು ಪ್ಯಾಂಟ್ ಅಥವಾ ಚೂಡಿದಾರ ಸಮವಸ್ತ್ರ : ಕೆಎಸ್‌ಸಿಪಿಸಿಆರ್‌ ಪ್ರಸ್ತಾವನೆ

ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಲವಾರು ಕ್ಷೇತ್ರಗಳಲ್ಲಿ ಬದಲಾವಣೆಯನ್ನು ತರಲು ಬಯಸಿದೆ. ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ ಬೆನ್ನಲ್ಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಗಮನ ಹರಿಸಿದ ಸರ್ಕಾರ ಇದೀಗ ಶಾಲಾ ವಿದ್ಯಾರ್ಥಿಗಳ ಸಮವಸ್ತ್ರದ ಮೇಲೂ ಕಣ್ಣಿಟ್ಟಿದ್ದು, ಸಮವಸ್ತ್ರ ಬದಲಾವಣೆಗೆ ಚಿಂತನೆ ನಡೆಸಿದೆ.

ಭದ್ರತೆ ಮತ್ತು ಹಿತದೃಷ್ಟಿಯಿಂದ​ 1 ರಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿನಿಯರಿಗೆ ಸ್ಕರ್ಟ್​​​ ಬದಲು ಪ್ಯಾಂಟ್ ಅಥವಾ ಚೂಡಿದಾರ ಸಮವಸ್ತ್ರ ಕಡ್ಡಾಯಗೊಳಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಸಾಧ್ಯವಾದರೆ ಶಾಲೆಗಳಲ್ಲಿ ಸೂಚಿಸಲಾದ ಸಮವಸ್ತ್ರದ ನಿಯಮಗಳು ಮತ್ತು ನಿಬಂಧನೆಗಳನ್ನು ಮರುಪರಿಶೀಲಿಸಿ ಮತ್ತು ಬಾಲಕಿಯರ ಒಟ್ಟಾರೆ ಅಭಿವೃದ್ಧಿಗಾಗಿ ಸಮವಸ್ತ್ರದ ನಿಯಮಗಳಲ್ಲಿ ಮಾರ್ಪಾಡು ಮಾಡಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೇಳಿದೆ.

ಇದರೊಂದಿಗೆ ಸ್ಕರ್ಟ್ ಧರಿಸುವ ಹುಡುಗಿಯರು ಎದುರಿಸುತ್ತಿರುವ ಅನಾನುಕೂಲತೆಗಳ ಕುರಿತು ಆಯೋಗಕ್ಕೆ ಪತ್ರ ಬರೆದ ನಂತರ ಶಿಫಾರಸು ಮಾಡಲಾಗಿದೆ. ಪತ್ರದಲ್ಲಿ ಹುಡುಗಿಯರು ನಾಚಿಕೆ ಸ್ವಭಾವದರಾಗಿದ್ದು, ಸಾಮಾನ್ಯವಾಗಿ ಸ್ಕರ್ಟ್ ಗಳನ್ನು ಧರಿಸುವುದರಿಂದ ಮುಜುಗರ ವ್ಯಕ್ತಪಡಿಸುತ್ತಾರೆ. ಪ್ರಯಾಣಿಸುವಾಗ, ಜನನಿಬಿಡ ಪ್ರದೇಶಗಳಲ್ಲಿ ತಿರುಗಾಡುವಾಗ, ಸೈಕ್ಲಿಂಗ್ ಅಥವಾ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಾಗ ಸ್ಕರ್ಟ್ ಧರಿಸುವುದು ಒಂದು ಅಡಚಣೆಯಾಗಿದೆ. ಇನ್ನು ಪತ್ರದಲ್ಲಿ ಲೈಂಗಿಕ ಕಿರುಕುಳದ ವರದಿಗಳೂ ಇವೆಯೆಂದು ಉಲ್ಲೇಖಿಸಿ, ಅವರ ಸಮವಸ್ತ್ರವನ್ನು ಚೂಡಿದಾರ್ ಅಥವಾ ಪ್ಯಾಂಟ್ ಗೆ ಬದಲಾಯಿಸುವಂತೆ ಸೂಚಿಸಿದೆ.

ಅಂದಹಾಗೆ ಕರ್ನಾಟಕ ಶಿಕ್ಷಣ ಕಾಯ್ದೆ,1983 ರ ಪ್ರಕಾರ, ಶೈಕ್ಷಣಿಕ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಶಿಫಾರಸು ಮಾಡಲು ಸ್ವತಂತ್ರವಾಗಿವೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಗಂಡುಮಕ್ಕಳಿಗೆ ಶರ್ಟ್, ಚಡ್ಡಿ ಅಥವಾ ಪ್ಯಾಂಟ್‌ಗಳನ್ನು ಸೂಚಿಸಿದರೆ, ಹೆಚ್ಚಿನ ಖಾಸಗಿ ಶಾಲಾ ಆಡಳಿತಗಳು ಹುಡುಗಿಯರಿಗೆ ಸ್ಕರ್ಟ್‌ಗಳನ್ನು ಸೂಚಿಸಿದೆ. ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಚೂಡಿದಾರಗಳನ್ನು ಧರಿಸುವುದು ಕಡ್ಡಾಯವಾಗಿದೆ. ಎಲ್ಲಾ ಸರಕಾರಿ, ಅನುದಾನಿತ ಮತ್ತು ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಧರಿಸುವುದು ಸಮವಸ್ತ್ರದ ಒಂದು ಭಾಗವಾಗಿದೆ. ಆದರೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮೇಲಿನ ಸಮಸ್ಯೆಗಳನ್ನು ಉಲ್ಲೇಖಿಸಿ ಪತ್ರ ಬರೆದಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಕೆಎಸ್‌ಸಿಪಿಸಿಆರ್‌ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು “ಸ್ಕರ್ಟ್​​​​ಗಿಂತ ಪ್ಯಾಂಟ್ ಅಥವಾ ಚೂಡಿದಾರ ಧರಿಸುವುದು ಉತ್ತಮ ಎಂಬ ಅಭಿಪ್ರಾಯವನ್ನು ಹೆಚ್ಚಿನ ವಿದ್ಯಾರ್ಥಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದ್ದರಿಂದ, ನಾವು ಡಿಎಸ್‌ಇಎಲ್‌ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ ಮತ್ತು ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

lokesh

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

6 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

6 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

7 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

8 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

9 hours ago