BREAKING NEWS

ಏಪ್ರಿಲ್ ಮೊದಲ ವಾರ ಮೈಸೂರಿಗೆ ಪ್ಯಾರಾ ಮಿಲಿಟರಿ ಪಡೆ : ಎಸ್ ಪಿ ಸೀಮಾ ಲಾಟ್ಕರ್

ಮೈಸೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಜನರಿಗೆ ಅಭಯ ನೀಡಲು ಏಪ್ರಿಲ್ ಮೊದಲ ವಾರದಲ್ಲಿ ಪ್ಯಾರಾ ಮಿಲಿಟರಿ ಪಡೆ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು. ನಗರದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಜಿಲ್ಲೆಯಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳು ಸಹ ಇವೆ. ಇಂತಹ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಜನರಿಗೆ ಅಭಯ ನೀಡಲು, ಪ್ಯಾರಾ ಮಿಲಿಟರಿ ಪಡೆ ಕರೆಸಲಾಗುತ್ತಿದೆ ಎಂದರು.ಮೈಸೂರು ಜಿಲ್ಲೆಯ ಯಾವ ಏರಿಯಾಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ಪಥಸಂಚಲನ ನಡೆಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೇ, ಪಾರದರ್ಶಕ ಚುನಾವಣೆಗೆ ಪೊಲೀಸ್​​ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಇದುವರೆಗೆ 46 ಲಕ್ಷ ನಗದು ವಶ : ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ ಇದುವರೆಗೆ ಒಟ್ಟು 46 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಕೆಲವು ಸಮಾಜ ಘಾತುಕ ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು. ಮೈಸೂರು ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. ಮೈಸೂರು ಜಿಲ್ಲೆಯ 8 ಕಡೆ ಚೆಕ್​ಪೋಸ್ಟ್ ತೆರೆಯಲಾಗಿದೆ. ಬಾವಲಿ ಚೆಕ್​ಪೋಸ್ಟ್ ಮೂಲಕ ಹೊರ ರಾಜ್ಯದಿಂದ ಹೆಚ್ಚಿನ ಜನರು ಆಗಮಿಸುತ್ತಾರೆ. ಅಲ್ಲದೇ, ಕೇರಳ ಗಡಿಯಲ್ಲಿ ನಕ್ಸಲ್ ಚಟುವಟಿಕೆ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.

ಕೇರಳ ಗಡಿಗೆ ಹೊಂದಿಕೊಂಡಂತೆ ಎಂಟು ಬೂತ್​ಗಳು ಬರಲಿದ್ದು ಆ ಭಾಗದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಇತರೆ ಜಿಲ್ಲೆಗಳಾದ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದಲೂ ಮೈಸೂರು ಜಿಲ್ಲೆಗೆ ಹೆಚ್ಚಿನ ಜನರು ಆಗಮಿಸುತ್ತಾರೆ. ಎಲ್ಲಾ ಚೆಕ್​ಪೋಸ್ಟ್​ಗಳಲ್ಲಿ ಅಧಿಕಾರಿಗಳು ನಿಗಾವಹಿಸಿದ್ದಾರೆ ಎಂದರು.

lokesh

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

4 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

4 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

4 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

4 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

4 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

4 hours ago