BREAKING NEWS

ಏಪ್ರಿಲ್ ಮೊದಲ ವಾರ ಮೈಸೂರಿಗೆ ಪ್ಯಾರಾ ಮಿಲಿಟರಿ ಪಡೆ : ಎಸ್ ಪಿ ಸೀಮಾ ಲಾಟ್ಕರ್

ಮೈಸೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಜನರಿಗೆ ಅಭಯ ನೀಡಲು ಏಪ್ರಿಲ್ ಮೊದಲ ವಾರದಲ್ಲಿ ಪ್ಯಾರಾ ಮಿಲಿಟರಿ ಪಡೆ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು. ನಗರದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಜಿಲ್ಲೆಯಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳು ಸಹ ಇವೆ. ಇಂತಹ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಜನರಿಗೆ ಅಭಯ ನೀಡಲು, ಪ್ಯಾರಾ ಮಿಲಿಟರಿ ಪಡೆ ಕರೆಸಲಾಗುತ್ತಿದೆ ಎಂದರು.ಮೈಸೂರು ಜಿಲ್ಲೆಯ ಯಾವ ಏರಿಯಾಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ಪಥಸಂಚಲನ ನಡೆಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೇ, ಪಾರದರ್ಶಕ ಚುನಾವಣೆಗೆ ಪೊಲೀಸ್​​ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಇದುವರೆಗೆ 46 ಲಕ್ಷ ನಗದು ವಶ : ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ ಇದುವರೆಗೆ ಒಟ್ಟು 46 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಕೆಲವು ಸಮಾಜ ಘಾತುಕ ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು. ಮೈಸೂರು ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. ಮೈಸೂರು ಜಿಲ್ಲೆಯ 8 ಕಡೆ ಚೆಕ್​ಪೋಸ್ಟ್ ತೆರೆಯಲಾಗಿದೆ. ಬಾವಲಿ ಚೆಕ್​ಪೋಸ್ಟ್ ಮೂಲಕ ಹೊರ ರಾಜ್ಯದಿಂದ ಹೆಚ್ಚಿನ ಜನರು ಆಗಮಿಸುತ್ತಾರೆ. ಅಲ್ಲದೇ, ಕೇರಳ ಗಡಿಯಲ್ಲಿ ನಕ್ಸಲ್ ಚಟುವಟಿಕೆ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.

ಕೇರಳ ಗಡಿಗೆ ಹೊಂದಿಕೊಂಡಂತೆ ಎಂಟು ಬೂತ್​ಗಳು ಬರಲಿದ್ದು ಆ ಭಾಗದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಇತರೆ ಜಿಲ್ಲೆಗಳಾದ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದಲೂ ಮೈಸೂರು ಜಿಲ್ಲೆಗೆ ಹೆಚ್ಚಿನ ಜನರು ಆಗಮಿಸುತ್ತಾರೆ. ಎಲ್ಲಾ ಚೆಕ್​ಪೋಸ್ಟ್​ಗಳಲ್ಲಿ ಅಧಿಕಾರಿಗಳು ನಿಗಾವಹಿಸಿದ್ದಾರೆ ಎಂದರು.

lokesh

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

15 mins ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

5 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

5 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

5 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

5 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

8 hours ago