ಮೈಸೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಜನರಿಗೆ ಅಭಯ ನೀಡಲು ಏಪ್ರಿಲ್ ಮೊದಲ ವಾರದಲ್ಲಿ ಪ್ಯಾರಾ ಮಿಲಿಟರಿ ಪಡೆ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಜಿಲ್ಲೆಯಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳು ಸಹ ಇವೆ. ಇಂತಹ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಜನರಿಗೆ ಅಭಯ ನೀಡಲು, ಪ್ಯಾರಾ ಮಿಲಿಟರಿ ಪಡೆ ಕರೆಸಲಾಗುತ್ತಿದೆ ಎಂದರು.ಮೈಸೂರು ಜಿಲ್ಲೆಯ ಯಾವ ಏರಿಯಾಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ಪಥಸಂಚಲನ ನಡೆಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೇ, ಪಾರದರ್ಶಕ ಚುನಾವಣೆಗೆ ಪೊಲೀಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ಇದುವರೆಗೆ 46 ಲಕ್ಷ ನಗದು ವಶ : ಜಿಲ್ಲೆಯ ಚೆಕ್ಪೋಸ್ಟ್ಗಳಲ್ಲಿ ಇದುವರೆಗೆ ಒಟ್ಟು 46 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಕೆಲವು ಸಮಾಜ ಘಾತುಕ ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು. ಮೈಸೂರು ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. ಮೈಸೂರು ಜಿಲ್ಲೆಯ 8 ಕಡೆ ಚೆಕ್ಪೋಸ್ಟ್ ತೆರೆಯಲಾಗಿದೆ. ಬಾವಲಿ ಚೆಕ್ಪೋಸ್ಟ್ ಮೂಲಕ ಹೊರ ರಾಜ್ಯದಿಂದ ಹೆಚ್ಚಿನ ಜನರು ಆಗಮಿಸುತ್ತಾರೆ. ಅಲ್ಲದೇ, ಕೇರಳ ಗಡಿಯಲ್ಲಿ ನಕ್ಸಲ್ ಚಟುವಟಿಕೆ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.
ಕೇರಳ ಗಡಿಗೆ ಹೊಂದಿಕೊಂಡಂತೆ ಎಂಟು ಬೂತ್ಗಳು ಬರಲಿದ್ದು ಆ ಭಾಗದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಇತರೆ ಜಿಲ್ಲೆಗಳಾದ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದಲೂ ಮೈಸೂರು ಜಿಲ್ಲೆಗೆ ಹೆಚ್ಚಿನ ಜನರು ಆಗಮಿಸುತ್ತಾರೆ. ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ಅಧಿಕಾರಿಗಳು ನಿಗಾವಹಿಸಿದ್ದಾರೆ ಎಂದರು.
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…