BREAKING NEWS

ಸಂಸತ್ ಭದ್ರತಾ ಲೋಪ: ಬಂಧನಕ್ಕೊಳಗಾದ ನಾಲ್ವರ ವಿದ್ಯಾಭ್ಯಾಸ ಹಾಗೂ ಉದ್ಯೋಗದ ಮಾಹಿತಿ

ಸಂಸತ್ ಭವನಕ್ಕೆ ನುಗ್ಗಿ ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಪೈಕಿ ಮನೋರಂಜನ್‌ ಕರ್ನಾಟಕದ ಮೈಸೂರು ಮೂಲದವನಾಗಿದ್ದು, ಬಿಇ ಪದವೀಧರ ಎನ್ನಲಾಗಿದೆ. ಮೈಸೂರಿನ ಸೇಂಟ್ ಜೋಸೆಫ್‌ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ಮನೋರಂಜನ್‌ ಮೈಸೂರಿನ ಮರಿಮಲ್ಲಪ್ಪ ಕಾಲೇಜಿನಲ್ಲಿ ಪಿಯುಸಿ ಹಾಗೂ ಬಿಐಟಿ ಕಾಲೇಜಿನಲ್ಲಿ ಬಿಇ ವಿದ್ಯಾಭ್ಯಾಸ ಮಾಡಿದ್ದನು. ಕ್ರಾಂತಿಕಾರಿಗಳ ವಿಚಾರಧಾರೆಯುಳ್ಳ ಪುಸ್ತಕಗಳನ್ನು ಹೆಚ್ಚಾಗಿ ಓದುತ್ತಿದ್ದ ಮನೋರಂಜನ್‌ ಮನೆಯಲ್ಲಿ ವಿವಾಹವಾಗು ಎಂದರೂ ಕೇಳದೇ ಸಮಾಜದ ಸುಧಾರಣೆ ಮಾಡ್ತೀನಿ ಎಂದು ಹೇಳಿ ಯಾವಾಗಲೂ ಪುಸ್ತಕಗಳನ್ನು ಓದುತ್ತಿದ್ದನಂತೆ.

ನೀಲಮ್:‌ ಇನ್ನು ನೀಲಮ್‌ ತಾಯಿ ನೀಡಿರುವ ಮಾಹಿತಿ ಪ್ರಕಾರ ನೀಲಮ್‌ ನಿರುದ್ಯೋಗದ ಬಗ್ಗೆ ಚಿಂತಿತಳಾಗಿದ್ದಳು. ಒಳ್ಳೆಯ ವಿದ್ಯಾಭ್ಯಾಸ ಪಡೆದರೂ ಕೆಲಸ ಸಿಗುತ್ತಿಲ್ಲ, ಇದಕ್ಕಿಂತ ಸಾಯುವುದೇ ಒಳ್ಳೆಯದು ಎಂದು ತನ್ನ ತಾಯಿಯ ಬಳಿ ನೀಲಮ್‌ ಹೇಳಿದ್ದಳಂತೆ. ಇನ್ನು ಹರಿಯಾಣದ ಜಿಂದ್‌ ಮೂಲದ ನೀಲಮ್‌ 30 ವರ್ಷ ವಯಸ್ಸಿನವಳಾಗಿದ್ದು ಬಿಎ, ಎಂಎ, ಬಿಎಡ್‌, ಎಂಎಡ್‌ ಹಾಗೂ ನೀಟ್‌ ಪದವಿಗಳನ್ನು ಹೊಂದಿದ್ದಾಳೆ. ಇದಾದ ಬಳಿಕ ಹಲವಾರು ದಿನಗಳ ಕಾಲ ನಿರುದ್ಯೋಗಿಯಾಗಿದ್ದ ನೀಲಮ್ ಹರಿಯಾಣ ನಾಗರೀಕ ಸೇವೆಗಳ ಪರೀಕ್ಷೆಗೂ ಸಹ ಸಿದ್ಧತೆಪಡಿಸಿಕೊಳ್ಳುತ್ತಿದ್ದಳಂತೆ. ಈಕೆಯ ಕುರಿತು ಮಾತನಾಡಿರುವ ಕುಟುಂಬಸ್ಥರು ಈಕೆಗೆ ಯಾವುದೇ ಸಂಘಟನೆಗಳ ಜತೆ ಹಾಗೂ ಪಕ್ಷಗಳ ಜತೆ ನಂಟಿಲ್ಲ ಎಂದು ಹೇಳಿದ್ದು ಈ ಹಿಂದೆ 2020-2021ರಲ್ಲಿ ಪಂಜಾಬ್‌ನಲ್ಲಿ ನಡೆದಿದ್ದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಳು ಹಾಗೂ ಇದೇ ವರ್ಷ ನಡೆದಿದ್ದ ರೆಸ್ಲರ್ಸ್‌ ಪ್ರತಿಭಟನೆಯಲ್ಲಿಯೂ ಸಹ ಭಾಗವಹಿಸಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಈ ಎರಡೂ ಪ್ರತಿಭಟನೆಯಲ್ಲಿಯೂ ನೀಲಮ್‌ ಬಂಧನಕ್ಕೊಳಗಾಗಿದ್ದಳು.

ಸಾಗರ್‌ ಶರ್ಮಾ: 27 ವರ್ಷದ ಸಾಗರ್‌ ಶರ್ಮಾ ಲಕ್ನೋದ ಅಲಾಮ್‌ಭಾಗ್‌ ಮೂಲದನಾಗಿದ್ದು, ಸಾಗರ್‌ ಶರ್ಮಾ ಕಿರಿಯ ಸೋದರಿ ನೀಡಿರುವ ಮಾಹಿತಿ ಪ್ರಕಾರ ಕಳೆದ ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಾಗರ್‌ ಶರ್ಮಾ ಈ ವರ್ಷದ ಆಗಸ್ಟ್‌ನಲ್ಲಿ ಲಕ್ನೋಗೆ ಮರಳಿದ್ದನಂತೆ. ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿರುವ ಸಾಗರ್‌ ಶರ್ಮಾ ಸದ್ಯ ಎಲೆಕ್ಟ್ರಾನಿಕ್‌ ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ. ಇನ್ನು ಸಾಗರ್‌ ಶರ್ಮಾ ತಂದೆ ಶಂಕರ್‌ಲಾಲ್‌ ಶರ್ಮಾ ವೃತ್ತಿಯಲ್ಲಿ ಬಡಗಿಯಾಗಿದ್ದು, ತಾಯಿ ಹೆಸರು ಲಾಲಿ ಎಂದು ತಿಳಿದುಬಂದಿದೆ.

ಅಮೋಲ್‌ ಶಿಂಧೆ: ಅಮೋಲ್‌ ಧನರಾಜ್‌ ಶಿಂಧೆ ಮಹಾರಾಷ್ಟ್ರದ ಲಟೂರ್‌ ಜಿಲ್ಲೆಯ ಚಕುರ್‌ ತೆಹ್ಸಿಲ್‌ನ ಝಾರಿ ಗ್ರಾಮದವನಾಗಿದ್ದಾನೆ. 25 ವರ್ಷದ ಅಮೋಲ್‌ ಶಿಂಧೆ ಭಾರತೀಯ ಸೇನೆ ಸೇರಬೇಕೆಂಬ ಗುರಿ ಹೊಂದಿದ್ದ ಹಾಗೂ ಸೇನೆ ನೇಮಕಾತಿ ಪರೀಕ್ಷೆಗಳಲ್ಲಿ ಯಶಸ್ವಿಯಾಗಲಾಗದೇ ಧೃತಿಗೆಟ್ಟಿದ್ದ ಎಂಬ ವಿಚಾರವನ್ನು ಆತನ ತಾಯಿ ತಿಳಿಸಿದ್ದಾರೆ.

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

30 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

35 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

44 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago