BREAKING NEWS

ಸಂಸತ್‌ ಭದ್ರತಾ ಲೋಪ: ಕರ್ನಾಟಕದ ಮತ್ತೊಬ್ಬ ಪೊಲೀಸರ ವಶಕ್ಕೆ

ಕಳೆದ ವಾರ ನಡೆದ ಸಂಸತ್‌ ದಾಳಿ ಪ್ರಕರಣದಲ್ಲಿ ಈಗಾಗಲೇ ಮೈಸೂರು ಮೂಲದ ಮನೋರಂಜನ್‌ ಸೇರಿದಂತೆ ಆರು ಜನರ ಬಂಧನವಾಗಿದ್ದು, ಇದೀಗ ಕರ್ನಾಟಕದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬಾತನನ್ನು ದೆಹಲಿ ಪೊಲೀಸರು ಕರೆದೊಯ್ದಿದ್ದಾರೆ. ಈತ ಬಾಗಲಕೋಟೆ ನಿವೃತ್ತ ಡಿವೈಎಸ್‌ಪಿ ವಿಠ್ಠಲ ಜಗಲಿ ಅವರ ಪುತ್ರ ಎಂಬುದು ತಿಳಿದುಬಂದಿದೆ.

ಮನೋರಂಜನ್‌ ತನ್ನ ಡೈರಿಯಲ್ಲಿ ಸಾಯಿಕೃಷ್ಣ ಹೆಸರನ್ನು ಬರೆದಿದ್ದ ಆಧಾರದ ಮೇಲೆ ಇಂದು ಸಂಜೆ ಏಳು ಗಂಟೆಗೆ ಬಾಗಲಕೋಟೆಯಲ್ಲಿನ ಸಾಯಿಕೃಷ್ಣ ಮನೆಗೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಸಾಯಿಕೃಷ್ಣನನ್ನು ಕರೆದೊಯ್ದಿದ್ದಾರೆ. ಮನೋರಂಜನ್‌ ಹಾಗೂ ಸಾಯಿಕೃಷ್ಣ 2008-09ರಲ್ಲಿ ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಸ್ನೇಹಿತರಾಗಿದ್ದು, ಒಂದೇ ರೂಮ್‌ನಲ್ಲಿ ವಾಸವಿದ್ದರು ಎಂಬ ಮಾಹಿತಿ ಸಹ ಕೇಳಿಬಂದಿದೆ.

2012ರಲ್ಲಿ ದೆಹಲಿಗೆ ತೆರಳಿದ್ದ ಸಾಯಿಕೃಷ್ಣ ಎನ್ರಿಚ್‌ ವಿಡಿಯೊ ಕಂಪೆನಿಯಲ್ಲಿ ಸೀನಿಯರ್‌ ಸಾಫ್ಟ್‌ವೇರ್‌ ಆಗಿದ್ದಾನೆ. ದೆಹಲಿಯ ಕಮಿಷನರೇಟ್‌ನ ಪಿಎಸ್‌ಐ ಪಿಂಟು ಶರ್ಮಾ ಹಾಗೂ ನಾಲ್ಕು ಸಿಬ್ಬಂದಿಗಳ ತಂಡ ಸಾಯಿಕೃಷ್ಣನನ್ನು ಬಂಧಿಸಿ ನವನಗರ ಠಾಣೆಗೆ ಕರೆದೊಯ್ದು ಬಳಿಕ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ.

andolana

Recent Posts

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

9 mins ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

36 mins ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

2 hours ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

2 hours ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

2 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

3 hours ago