ಕಳೆದ ವಾರ ನಡೆದ ಸಂಸತ್ ದಾಳಿ ಪ್ರಕರಣದಲ್ಲಿ ಈಗಾಗಲೇ ಮೈಸೂರು ಮೂಲದ ಮನೋರಂಜನ್ ಸೇರಿದಂತೆ ಆರು ಜನರ ಬಂಧನವಾಗಿದ್ದು, ಇದೀಗ ಕರ್ನಾಟಕದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬಾತನನ್ನು ದೆಹಲಿ ಪೊಲೀಸರು ಕರೆದೊಯ್ದಿದ್ದಾರೆ. ಈತ ಬಾಗಲಕೋಟೆ ನಿವೃತ್ತ ಡಿವೈಎಸ್ಪಿ ವಿಠ್ಠಲ ಜಗಲಿ ಅವರ ಪುತ್ರ ಎಂಬುದು ತಿಳಿದುಬಂದಿದೆ.
ಮನೋರಂಜನ್ ತನ್ನ ಡೈರಿಯಲ್ಲಿ ಸಾಯಿಕೃಷ್ಣ ಹೆಸರನ್ನು ಬರೆದಿದ್ದ ಆಧಾರದ ಮೇಲೆ ಇಂದು ಸಂಜೆ ಏಳು ಗಂಟೆಗೆ ಬಾಗಲಕೋಟೆಯಲ್ಲಿನ ಸಾಯಿಕೃಷ್ಣ ಮನೆಗೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಸಾಯಿಕೃಷ್ಣನನ್ನು ಕರೆದೊಯ್ದಿದ್ದಾರೆ. ಮನೋರಂಜನ್ ಹಾಗೂ ಸಾಯಿಕೃಷ್ಣ 2008-09ರಲ್ಲಿ ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಸ್ನೇಹಿತರಾಗಿದ್ದು, ಒಂದೇ ರೂಮ್ನಲ್ಲಿ ವಾಸವಿದ್ದರು ಎಂಬ ಮಾಹಿತಿ ಸಹ ಕೇಳಿಬಂದಿದೆ.
2012ರಲ್ಲಿ ದೆಹಲಿಗೆ ತೆರಳಿದ್ದ ಸಾಯಿಕೃಷ್ಣ ಎನ್ರಿಚ್ ವಿಡಿಯೊ ಕಂಪೆನಿಯಲ್ಲಿ ಸೀನಿಯರ್ ಸಾಫ್ಟ್ವೇರ್ ಆಗಿದ್ದಾನೆ. ದೆಹಲಿಯ ಕಮಿಷನರೇಟ್ನ ಪಿಎಸ್ಐ ಪಿಂಟು ಶರ್ಮಾ ಹಾಗೂ ನಾಲ್ಕು ಸಿಬ್ಬಂದಿಗಳ ತಂಡ ಸಾಯಿಕೃಷ್ಣನನ್ನು ಬಂಧಿಸಿ ನವನಗರ ಠಾಣೆಗೆ ಕರೆದೊಯ್ದು ಬಳಿಕ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…