ಕಳೆದ ವಾರ ನಡೆದ ಸಂಸತ್ ದಾಳಿ ಪ್ರಕರಣದಲ್ಲಿ ಈಗಾಗಲೇ ಮೈಸೂರು ಮೂಲದ ಮನೋರಂಜನ್ ಸೇರಿದಂತೆ ಆರು ಜನರ ಬಂಧನವಾಗಿದ್ದು, ಇದೀಗ ಕರ್ನಾಟಕದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬಾತನನ್ನು ದೆಹಲಿ ಪೊಲೀಸರು ಕರೆದೊಯ್ದಿದ್ದಾರೆ. ಈತ ಬಾಗಲಕೋಟೆ ನಿವೃತ್ತ ಡಿವೈಎಸ್ಪಿ ವಿಠ್ಠಲ ಜಗಲಿ ಅವರ ಪುತ್ರ ಎಂಬುದು ತಿಳಿದುಬಂದಿದೆ.
ಮನೋರಂಜನ್ ತನ್ನ ಡೈರಿಯಲ್ಲಿ ಸಾಯಿಕೃಷ್ಣ ಹೆಸರನ್ನು ಬರೆದಿದ್ದ ಆಧಾರದ ಮೇಲೆ ಇಂದು ಸಂಜೆ ಏಳು ಗಂಟೆಗೆ ಬಾಗಲಕೋಟೆಯಲ್ಲಿನ ಸಾಯಿಕೃಷ್ಣ ಮನೆಗೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಸಾಯಿಕೃಷ್ಣನನ್ನು ಕರೆದೊಯ್ದಿದ್ದಾರೆ. ಮನೋರಂಜನ್ ಹಾಗೂ ಸಾಯಿಕೃಷ್ಣ 2008-09ರಲ್ಲಿ ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಸ್ನೇಹಿತರಾಗಿದ್ದು, ಒಂದೇ ರೂಮ್ನಲ್ಲಿ ವಾಸವಿದ್ದರು ಎಂಬ ಮಾಹಿತಿ ಸಹ ಕೇಳಿಬಂದಿದೆ.
2012ರಲ್ಲಿ ದೆಹಲಿಗೆ ತೆರಳಿದ್ದ ಸಾಯಿಕೃಷ್ಣ ಎನ್ರಿಚ್ ವಿಡಿಯೊ ಕಂಪೆನಿಯಲ್ಲಿ ಸೀನಿಯರ್ ಸಾಫ್ಟ್ವೇರ್ ಆಗಿದ್ದಾನೆ. ದೆಹಲಿಯ ಕಮಿಷನರೇಟ್ನ ಪಿಎಸ್ಐ ಪಿಂಟು ಶರ್ಮಾ ಹಾಗೂ ನಾಲ್ಕು ಸಿಬ್ಬಂದಿಗಳ ತಂಡ ಸಾಯಿಕೃಷ್ಣನನ್ನು ಬಂಧಿಸಿ ನವನಗರ ಠಾಣೆಗೆ ಕರೆದೊಯ್ದು ಬಳಿಕ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…