ಕಳೆದ ವಾರ ನಡೆದ ಸಂಸತ್ ದಾಳಿ ಪ್ರಕರಣದಲ್ಲಿ ಈಗಾಗಲೇ ಮೈಸೂರು ಮೂಲದ ಮನೋರಂಜನ್ ಸೇರಿದಂತೆ ಆರು ಜನರ ಬಂಧನವಾಗಿದ್ದು, ಇದೀಗ ಕರ್ನಾಟಕದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬಾತನನ್ನು ದೆಹಲಿ ಪೊಲೀಸರು ಕರೆದೊಯ್ದಿದ್ದಾರೆ. ಈತ ಬಾಗಲಕೋಟೆ ನಿವೃತ್ತ ಡಿವೈಎಸ್ಪಿ ವಿಠ್ಠಲ ಜಗಲಿ ಅವರ ಪುತ್ರ ಎಂಬುದು ತಿಳಿದುಬಂದಿದೆ.
ಮನೋರಂಜನ್ ತನ್ನ ಡೈರಿಯಲ್ಲಿ ಸಾಯಿಕೃಷ್ಣ ಹೆಸರನ್ನು ಬರೆದಿದ್ದ ಆಧಾರದ ಮೇಲೆ ಇಂದು ಸಂಜೆ ಏಳು ಗಂಟೆಗೆ ಬಾಗಲಕೋಟೆಯಲ್ಲಿನ ಸಾಯಿಕೃಷ್ಣ ಮನೆಗೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಸಾಯಿಕೃಷ್ಣನನ್ನು ಕರೆದೊಯ್ದಿದ್ದಾರೆ. ಮನೋರಂಜನ್ ಹಾಗೂ ಸಾಯಿಕೃಷ್ಣ 2008-09ರಲ್ಲಿ ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಸ್ನೇಹಿತರಾಗಿದ್ದು, ಒಂದೇ ರೂಮ್ನಲ್ಲಿ ವಾಸವಿದ್ದರು ಎಂಬ ಮಾಹಿತಿ ಸಹ ಕೇಳಿಬಂದಿದೆ.
2012ರಲ್ಲಿ ದೆಹಲಿಗೆ ತೆರಳಿದ್ದ ಸಾಯಿಕೃಷ್ಣ ಎನ್ರಿಚ್ ವಿಡಿಯೊ ಕಂಪೆನಿಯಲ್ಲಿ ಸೀನಿಯರ್ ಸಾಫ್ಟ್ವೇರ್ ಆಗಿದ್ದಾನೆ. ದೆಹಲಿಯ ಕಮಿಷನರೇಟ್ನ ಪಿಎಸ್ಐ ಪಿಂಟು ಶರ್ಮಾ ಹಾಗೂ ನಾಲ್ಕು ಸಿಬ್ಬಂದಿಗಳ ತಂಡ ಸಾಯಿಕೃಷ್ಣನನ್ನು ಬಂಧಿಸಿ ನವನಗರ ಠಾಣೆಗೆ ಕರೆದೊಯ್ದು ಬಳಿಕ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…