BREAKING NEWS

ಸಂಸತ್‌ ಭದ್ರತಾ ಲೋಪ: ಆರನೇ ಆರೋಪಿ ಬಂಧನ

ನವದೆಹಲಿ : ಸಂಸತ್ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ ಆರೋಪಿ ಮಹೇಶ್ ಕುಮಾವತ್‌ ಎಂಬಾತನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮಹೇಶ್ ಕುಮಾವತ್‌ ರಾಜಸ್ಥಾನದ ನಾಗೋರ್ ಜಿಲ್ಲೆಯವನಾಗಿದ್ದು, ಸಂಸತ್‌ನಲ್ಲಿ ಭದ್ರತಾ ವೈಫಲ್ಯವಾದ ದಿನದಂದು ಈತ ಕೂಡ ನವದೆಹಲಿಗೆ ಆಗಮಿಸಿದ್ದು, ಈತ ಕೂಡ ಈ ಸಂಚಿನ ಭಾಗವಾಗಿದ್ದನೆಂದು ದೃಢಪಟ್ಟ ನಂತರ ಆತನ ಬಂಧಿಸಿದ್ದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸಂಚಿನ ಪ್ರಮುಖ ರೂವಾರಿಯಾಗಿದ್ದ ಲಲಿತ್ ಝಾ ಘಟನೆ ನಡೆದ ಬೆನ್ನಲ್ಲೇ ರಾಜಸ್ಥಾನದಲ್ಲಿ ಮಹೇಶ್ ಇರುವ ಸ್ಥಳದಲ್ಲಿ ಅಡಗಿ ಕುಳಿತಿದ್ದ. ಈ ಸಂಚಿನ ಭಾಗವಾಗಿದ್ದ ಇತರ ನಾಲ್ಕು ಮಂದಿಯ ಮೊಬೈಲ್ ಫೋನ್ ನಾಶಪಡಿಸುವಲ್ಲಿ ಮಹೇಶ್ ಕೂಡ ಲಲಿತ್‌ಗೆ ಜೊತೆಯಾಗಿದ್ದ. ಡಿಸೆಂಬರ್ 13ರಂದು ಸಂಸತ್ ಕಟ್ಟಡದ ಹೊರಗೆ ಪ್ರತಿಭಟಿಸಿದ್ದ ಇಬ್ಬರಲ್ಲಿ ಒಬ್ಬಳಾಗಿದ್ದ ನೀಲಂ ಜೊತೆಗೆ ಮಹೇಶ್ ನಿರಂತರ ಸಂಪರ್ಕದಲ್ಲಿದ್ದನೆಂದು ತಿಳಿದು ಬಂದಿದೆ.

ಲಲಿತ್ ಮತ್ತು ಮಹೇಶ್ ಇಬ್ಬರೂ ಗುರುವಾರವೇ ದಿಲ್ಲಿಯ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಶುಕ್ರವಾರ ಲಲಿತ್ ಬಂಧನವಾಗಿತ್ತು.

andolanait

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

16 mins ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

33 mins ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

47 mins ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

1 hour ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

1 hour ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

1 hour ago