BREAKING NEWS

ಸಂಸತ್‌ ಭದ್ರತಾ ಲೋಪ: ಆರನೇ ಆರೋಪಿ ಬಂಧನ

ನವದೆಹಲಿ : ಸಂಸತ್ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ ಆರೋಪಿ ಮಹೇಶ್ ಕುಮಾವತ್‌ ಎಂಬಾತನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮಹೇಶ್ ಕುಮಾವತ್‌ ರಾಜಸ್ಥಾನದ ನಾಗೋರ್ ಜಿಲ್ಲೆಯವನಾಗಿದ್ದು, ಸಂಸತ್‌ನಲ್ಲಿ ಭದ್ರತಾ ವೈಫಲ್ಯವಾದ ದಿನದಂದು ಈತ ಕೂಡ ನವದೆಹಲಿಗೆ ಆಗಮಿಸಿದ್ದು, ಈತ ಕೂಡ ಈ ಸಂಚಿನ ಭಾಗವಾಗಿದ್ದನೆಂದು ದೃಢಪಟ್ಟ ನಂತರ ಆತನ ಬಂಧಿಸಿದ್ದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸಂಚಿನ ಪ್ರಮುಖ ರೂವಾರಿಯಾಗಿದ್ದ ಲಲಿತ್ ಝಾ ಘಟನೆ ನಡೆದ ಬೆನ್ನಲ್ಲೇ ರಾಜಸ್ಥಾನದಲ್ಲಿ ಮಹೇಶ್ ಇರುವ ಸ್ಥಳದಲ್ಲಿ ಅಡಗಿ ಕುಳಿತಿದ್ದ. ಈ ಸಂಚಿನ ಭಾಗವಾಗಿದ್ದ ಇತರ ನಾಲ್ಕು ಮಂದಿಯ ಮೊಬೈಲ್ ಫೋನ್ ನಾಶಪಡಿಸುವಲ್ಲಿ ಮಹೇಶ್ ಕೂಡ ಲಲಿತ್‌ಗೆ ಜೊತೆಯಾಗಿದ್ದ. ಡಿಸೆಂಬರ್ 13ರಂದು ಸಂಸತ್ ಕಟ್ಟಡದ ಹೊರಗೆ ಪ್ರತಿಭಟಿಸಿದ್ದ ಇಬ್ಬರಲ್ಲಿ ಒಬ್ಬಳಾಗಿದ್ದ ನೀಲಂ ಜೊತೆಗೆ ಮಹೇಶ್ ನಿರಂತರ ಸಂಪರ್ಕದಲ್ಲಿದ್ದನೆಂದು ತಿಳಿದು ಬಂದಿದೆ.

ಲಲಿತ್ ಮತ್ತು ಮಹೇಶ್ ಇಬ್ಬರೂ ಗುರುವಾರವೇ ದಿಲ್ಲಿಯ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಶುಕ್ರವಾರ ಲಲಿತ್ ಬಂಧನವಾಗಿತ್ತು.

andolanait

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

1 hour ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

2 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

3 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

4 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

5 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

8 hours ago