ನವದೆಹಲಿ : ಸಂಸತ್ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ ಆರೋಪಿ ಮಹೇಶ್ ಕುಮಾವತ್ ಎಂಬಾತನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮಹೇಶ್ ಕುಮಾವತ್ ರಾಜಸ್ಥಾನದ ನಾಗೋರ್ ಜಿಲ್ಲೆಯವನಾಗಿದ್ದು, ಸಂಸತ್ನಲ್ಲಿ ಭದ್ರತಾ ವೈಫಲ್ಯವಾದ ದಿನದಂದು ಈತ ಕೂಡ ನವದೆಹಲಿಗೆ ಆಗಮಿಸಿದ್ದು, ಈತ ಕೂಡ ಈ ಸಂಚಿನ ಭಾಗವಾಗಿದ್ದನೆಂದು ದೃಢಪಟ್ಟ ನಂತರ ಆತನ ಬಂಧಿಸಿದ್ದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ಸಂಚಿನ ಪ್ರಮುಖ ರೂವಾರಿಯಾಗಿದ್ದ ಲಲಿತ್ ಝಾ ಘಟನೆ ನಡೆದ ಬೆನ್ನಲ್ಲೇ ರಾಜಸ್ಥಾನದಲ್ಲಿ ಮಹೇಶ್ ಇರುವ ಸ್ಥಳದಲ್ಲಿ ಅಡಗಿ ಕುಳಿತಿದ್ದ. ಈ ಸಂಚಿನ ಭಾಗವಾಗಿದ್ದ ಇತರ ನಾಲ್ಕು ಮಂದಿಯ ಮೊಬೈಲ್ ಫೋನ್ ನಾಶಪಡಿಸುವಲ್ಲಿ ಮಹೇಶ್ ಕೂಡ ಲಲಿತ್ಗೆ ಜೊತೆಯಾಗಿದ್ದ. ಡಿಸೆಂಬರ್ 13ರಂದು ಸಂಸತ್ ಕಟ್ಟಡದ ಹೊರಗೆ ಪ್ರತಿಭಟಿಸಿದ್ದ ಇಬ್ಬರಲ್ಲಿ ಒಬ್ಬಳಾಗಿದ್ದ ನೀಲಂ ಜೊತೆಗೆ ಮಹೇಶ್ ನಿರಂತರ ಸಂಪರ್ಕದಲ್ಲಿದ್ದನೆಂದು ತಿಳಿದು ಬಂದಿದೆ.
ಲಲಿತ್ ಮತ್ತು ಮಹೇಶ್ ಇಬ್ಬರೂ ಗುರುವಾರವೇ ದಿಲ್ಲಿಯ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಶುಕ್ರವಾರ ಲಲಿತ್ ಬಂಧನವಾಗಿತ್ತು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…