BREAKING NEWS

ಪಾರ್ಲಿಮೆಂಟ್‌ ಭದ್ರತಾ ಲೋಪ: ಆರೋಪಿಗಳು ಹೇಳಿದ್ದೇನು?

ನವದೆಹಲಿ : ಡಿಸೆಂಬರ್‌ ೧೩ (ಅಧಿವೇಶನದ ೮ ನೇ ದಿನ) ರಂದು ಸಂಸತ್‌ ಭದ್ರತೆ ಉಲ್ಲಂಘಿಸಿದ ೬ ಜನರ ಪೈಕಿ ಐವರು ಪೊಲೀಸರ ವಶದಲ್ಲಿದ್ದಾರೆ. ಬುಧವಾರ ನೂತನ ಸಂಸತ್‌ ಕಲಾಪದ ವೇಳೆಯಲ್ಲಿ ಇಬ್ಬರು ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು, ಘೋಷಣೆ ಕೂಗತೊಡಗಿದರು. ಅಲ್ಲದೇ ಹಳದಿ ಬಣ್ಣದ ಸ್ಮೋಕ್‌ ಕ್ಯಾನ್‌ಗಳನ್ನು ಹರಡಿದ್ದರು. ಈ ಇಬ್ಬರನ್ನು ತಕ್ಷಣವೇ ಪೊಲೀಸರು ಬಂಧಿಸಿದ್ದರು. ಮತ್ತೆ ಮೂವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಈ ಪ್ರಕರಣದ ಬಗ್ಗೆ ಆರೋಪಿಗಳು ಮಾತನಾಡಿದ್ದಾರೆ. ತಾವು ವಿವಿಧ ವಿಚಾರಗಳ ಕುರಿತು ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಕೆಲಸ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಮಣಿಪುರ ಹಿಂಸಾಚಾರ, ರೈತರ ಸಮಸ್ಯೆ, ನಿರುದ್ಯೋಗ ಇನ್ನು ಮುಂತಾದ ದೇಶದ ಸಮಸ್ಯೆಗಳ ಬಗ್ಗೆ ಸಂಸದರು ಚರ್ಚೆ ನಡೆಸಬೇಕು ಎಂಬ ತಮ್ಮ ಬೇಡಿಕೆಗಳತ್ತ ಗಮನ ಸೆಳೆಯುವ ನಿಟ್ಟಿನಲ್ಲಿ ಬಣ್ಣದ ಹೊಗೆಯನ್ನು ಬಳಸಲಾಯಿತು ಎಂದು ಆರೋಪಿಗಳು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಬುಧವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆನ್ನಲ್ಲೇ ಒಬ್ಬಾತ ತಾನು ಯಾವುದೇ ಸಂಘಟನೆಗೆ ಸೇರಿದವನಲ್ಲ. ನಾವು ವಿದ್ಯಾರ್ಥಿಗಳಾಗಿದ್ದು, ನಿರುದ್ಯೋಗಿಗಳಾಗಿದ್ದೇವೆ. ನಮ್ಮಲ್ಲಿ ಹಲವಾರು ಜನರ ಪೋಷಕರು ಕಾರ್ಮಿಕರು, ರೈತರು ಹಾಗೂ ಅಂಗಡಿ ಮಾಲೀಕರಾಗಿದ್ದು, ನಮ್ಮ ಧನಿಯನ್ನು ಅಡಗಿಸಲಾಗುತ್ತಿದೆ ಎಂದು ಹೇಳಿದ್ದ.

ದೆಹಲಿಯ ಪೊಲೀಸ್‌ ವಿಶೇಷ ಘಟಕ ಈ ಪ್ರಕರಣದ ತನಿಖೆ ಮಾಡುತ್ತಿದ್ದೆ. ಇತ್ತು ಬಂಧಿತ ಆರೋಪಿಗಳಿಗೆ ಯಾವುದೇ ಸಂಘಟನಯೆ ನಂಟು ಇದೆಯಾ ಎಂಬ ಬಗ್ಗೆ ಈಗಾಗಲೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇವರೆಲ್ಲರು ಭಗತ್‌ ಸಿಂಗ್‌ ಫ್ಯಾನ್‌ ಕ್ಲಬ್‌ ಎಂಬ ಸಾಮಾಜಿಕ ಜಾಲತಾಣದಲ್ಲಿನ ಪೇಜ್‌ನಲ್ಲಿ ಸಂಬಂಧ ಹೊಂದಿದ್ದರು. ೯ ತಿಂಗಳ ಹಿಂದೆ ಸಂಸತ್‌ ಪ್ರವೇಶಿಸುವ ಬಗ್ಗೆ ಭೆಟಿಯಾಗಿ ಚರ್ಚಿಸಿದ್ದರು. ಡಿಸೆಂಬರ್‌ ೧೦ ರಂದು ಎಲ್ಲರೂ ತಮ್ಮ ತಮ್ಮ ರಾಜ್ಯಗಳಿಂದ ಹೊರಟು ದೆಹಲಿ ತಲುಪಿದರು. ಬುಧವಾರ ೧೨ ಗಂಟೆಗೆ ಸಂಸತ್‌ ಪ್ರವೇಶಿಸಿ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಸ್ಮೋಕ್‌ ಕ್ಯಾನ್‌ ತೆಗೆದರು. ಅಲ್ಲದೇ ಮತ್ತೊಬ್ಬ ಸದನದಲ್ಲಿ ಹಳದಿ ಬಣ್ಣ ಎರಚಿದನು.

೨೦೦೧ರ ಡಿಸೆಂಬರ್‌ ನಲ್ಲಿ ನಡೆದ ಉಗ್ರರ ದಾಳಿಯ ನಡುವೆ ಈ ಭದ್ರತಾ ಲೋಪ ಕಂಡುಬಂದಿದೆ. ಸಂಸತ್‌ ನಲ್ಲಿ ೪ ಲೇಯರ್‌ ಭದ್ರತೆ ಇದ್ದೂ ಸಹಾ ಅದನ್ನು ಬೇಧಿಸಿ ಈ ಘಟನೆ ನಡೆದದ್ದು ಹೇಗೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

andolanait

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

39 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

12 hours ago