BREAKING NEWS

ಸಿಐಎಸ್‌ಎಫ್‌ʼಗೆʼ ಸಂಸತ್‌ನ ಭದ್ರತಾ ಜವಬ್ಧಾರಿ

ನವದೆಹಲಿ: ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಕೇಂದ್ರ ಗೃಹ ಸಚಿವಾಲಯ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಸಿಐಎಸ್ಎಫ್ ಭದ್ರತೆ ಮತ್ತು ಅಗ್ನಿಶಾಮಕ ದಳವನ್ನು ಸಮಗ್ರ ಮಾದರಿಯಲ್ಲಿ ನಿಯಮಿತವಾಗಿ ನಿಯೋಜಿಸಲಾಗುವುದು ಎಂದು ಮೂಲಗಳು ತಿಳಿಸಿವೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಸಿಐಎಸ್‌ಎಫ್‌ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಆಗಿದ್ದು, ಇದು ಪ್ರಸ್ತುತ ದೆಹಲಿಯಲ್ಲಿನ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳುಸ ಪರಮಾಣು ಮತ್ತು ಏರೋಸ್ಪೇಸ್ ಸ್ಥಳಗಳು, ವಿಮಾನ ನಿಲ್ದಾಣಗಳು ಮತ್ತು ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಭದ್ರತೆ ಉಸ್ತುವಾರಿ ನೋಡಿಕೊಳ್ಳುತ್ತಿದೆ.

ಸಿಐಎಸ್ಎಫ್ನ ಸರ್ಕಾರಿ ಕಟ್ಟಡ ಭದ್ರತಾ (ಜಿಬಿಎಸ್) ಘಟಕದಿಂದ ಪಡೆದ ತಜ್ಞರು, ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಅಗ್ನಿ ಶಾಮಕ ಅಧಿಕಾರಿಗಳು ಮತ್ತು ಪ್ರಸ್ತುತ ಸಂಸತ್ತಿನ ಭದ್ರತಾ ತಂಡದ ಅಧಿಕಾರಿಗಳೊಂದಿಗೆ ಈ ವಾರದ ಕೊನೆಯಲ್ಲಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.

ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಸಿಐಎಸ್ಎಫ್ನ ಸಮಗ್ರ ಭದ್ರತೆ ಅಡಿಯಲ್ಲಿ ತರಲಾಗುತ್ತಿದೆ.ಇದು ಸಂಸತ್ತಿನ ಭದ್ರತಾ ಸೇವೆ, ದೆಹಲಿ ಪೊಲೀಸ್ ಮತ್ತು ಸಿಐಎಸ್ ಎಫ್ ನ ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ ನ್ನು ಒಳಗೊಂಡಿರುತ್ತದೆ ಎಂದು ಮೂಲಗಳು ತಿಳಿಸಿವೆ.

andolanait

Recent Posts

ಬೆಂಗಳೂರಿನಲ್ಲಿ ಜೂನಿಯರ್‌ ಎನ್‌ಟಿಆರ್‌ ನೋಡಲು ಮುಗಿಬಿದ್ದ ಅಭಿಮಾನಿಗಳು

ಬೆಂಗಳೂರು: ಖ್ಯಾತ ನಟ ಜೂನಿಯರ್‌ ಎನ್‌ಟಿಆರ್‌ ಅವರಿಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆಸ್ಪತ್ರೆಯೊಂದರ ಉದ್ಘಾಟನೆಗೆ…

1 min ago

ರಾಮನಗರ: ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…

1 hour ago

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ…

2 hours ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

3 hours ago

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…

3 hours ago