BREAKING NEWS

ಸಿಐಎಸ್‌ಎಫ್‌ʼಗೆʼ ಸಂಸತ್‌ನ ಭದ್ರತಾ ಜವಬ್ಧಾರಿ

ನವದೆಹಲಿ: ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಕೇಂದ್ರ ಗೃಹ ಸಚಿವಾಲಯ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಸಿಐಎಸ್ಎಫ್ ಭದ್ರತೆ ಮತ್ತು ಅಗ್ನಿಶಾಮಕ ದಳವನ್ನು ಸಮಗ್ರ ಮಾದರಿಯಲ್ಲಿ ನಿಯಮಿತವಾಗಿ ನಿಯೋಜಿಸಲಾಗುವುದು ಎಂದು ಮೂಲಗಳು ತಿಳಿಸಿವೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಸಿಐಎಸ್‌ಎಫ್‌ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಆಗಿದ್ದು, ಇದು ಪ್ರಸ್ತುತ ದೆಹಲಿಯಲ್ಲಿನ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳುಸ ಪರಮಾಣು ಮತ್ತು ಏರೋಸ್ಪೇಸ್ ಸ್ಥಳಗಳು, ವಿಮಾನ ನಿಲ್ದಾಣಗಳು ಮತ್ತು ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಭದ್ರತೆ ಉಸ್ತುವಾರಿ ನೋಡಿಕೊಳ್ಳುತ್ತಿದೆ.

ಸಿಐಎಸ್ಎಫ್ನ ಸರ್ಕಾರಿ ಕಟ್ಟಡ ಭದ್ರತಾ (ಜಿಬಿಎಸ್) ಘಟಕದಿಂದ ಪಡೆದ ತಜ್ಞರು, ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಅಗ್ನಿ ಶಾಮಕ ಅಧಿಕಾರಿಗಳು ಮತ್ತು ಪ್ರಸ್ತುತ ಸಂಸತ್ತಿನ ಭದ್ರತಾ ತಂಡದ ಅಧಿಕಾರಿಗಳೊಂದಿಗೆ ಈ ವಾರದ ಕೊನೆಯಲ್ಲಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.

ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಸಿಐಎಸ್ಎಫ್ನ ಸಮಗ್ರ ಭದ್ರತೆ ಅಡಿಯಲ್ಲಿ ತರಲಾಗುತ್ತಿದೆ.ಇದು ಸಂಸತ್ತಿನ ಭದ್ರತಾ ಸೇವೆ, ದೆಹಲಿ ಪೊಲೀಸ್ ಮತ್ತು ಸಿಐಎಸ್ ಎಫ್ ನ ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ ನ್ನು ಒಳಗೊಂಡಿರುತ್ತದೆ ಎಂದು ಮೂಲಗಳು ತಿಳಿಸಿವೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago