ನವದೆಹಲಿ: ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಕೇಂದ್ರ ಗೃಹ ಸಚಿವಾಲಯ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಸಿಐಎಸ್ಎಫ್ ಭದ್ರತೆ ಮತ್ತು ಅಗ್ನಿಶಾಮಕ ದಳವನ್ನು ಸಮಗ್ರ ಮಾದರಿಯಲ್ಲಿ ನಿಯಮಿತವಾಗಿ ನಿಯೋಜಿಸಲಾಗುವುದು ಎಂದು ಮೂಲಗಳು ತಿಳಿಸಿವೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಸಿಐಎಸ್ಎಫ್ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಆಗಿದ್ದು, ಇದು ಪ್ರಸ್ತುತ ದೆಹಲಿಯಲ್ಲಿನ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳುಸ ಪರಮಾಣು ಮತ್ತು ಏರೋಸ್ಪೇಸ್ ಸ್ಥಳಗಳು, ವಿಮಾನ ನಿಲ್ದಾಣಗಳು ಮತ್ತು ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಭದ್ರತೆ ಉಸ್ತುವಾರಿ ನೋಡಿಕೊಳ್ಳುತ್ತಿದೆ.
ಸಿಐಎಸ್ಎಫ್ನ ಸರ್ಕಾರಿ ಕಟ್ಟಡ ಭದ್ರತಾ (ಜಿಬಿಎಸ್) ಘಟಕದಿಂದ ಪಡೆದ ತಜ್ಞರು, ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಅಗ್ನಿ ಶಾಮಕ ಅಧಿಕಾರಿಗಳು ಮತ್ತು ಪ್ರಸ್ತುತ ಸಂಸತ್ತಿನ ಭದ್ರತಾ ತಂಡದ ಅಧಿಕಾರಿಗಳೊಂದಿಗೆ ಈ ವಾರದ ಕೊನೆಯಲ್ಲಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.
ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಸಿಐಎಸ್ಎಫ್ನ ಸಮಗ್ರ ಭದ್ರತೆ ಅಡಿಯಲ್ಲಿ ತರಲಾಗುತ್ತಿದೆ.ಇದು ಸಂಸತ್ತಿನ ಭದ್ರತಾ ಸೇವೆ, ದೆಹಲಿ ಪೊಲೀಸ್ ಮತ್ತು ಸಿಐಎಸ್ ಎಫ್ ನ ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ ನ್ನು ಒಳಗೊಂಡಿರುತ್ತದೆ ಎಂದು ಮೂಲಗಳು ತಿಳಿಸಿವೆ.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…