ನವದೆಹಲಿ: ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಕೇಂದ್ರ ಗೃಹ ಸಚಿವಾಲಯ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಸಿಐಎಸ್ಎಫ್ ಭದ್ರತೆ ಮತ್ತು ಅಗ್ನಿಶಾಮಕ ದಳವನ್ನು ಸಮಗ್ರ ಮಾದರಿಯಲ್ಲಿ ನಿಯಮಿತವಾಗಿ ನಿಯೋಜಿಸಲಾಗುವುದು ಎಂದು ಮೂಲಗಳು ತಿಳಿಸಿವೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಸಿಐಎಸ್ಎಫ್ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಆಗಿದ್ದು, ಇದು ಪ್ರಸ್ತುತ ದೆಹಲಿಯಲ್ಲಿನ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳುಸ ಪರಮಾಣು ಮತ್ತು ಏರೋಸ್ಪೇಸ್ ಸ್ಥಳಗಳು, ವಿಮಾನ ನಿಲ್ದಾಣಗಳು ಮತ್ತು ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಭದ್ರತೆ ಉಸ್ತುವಾರಿ ನೋಡಿಕೊಳ್ಳುತ್ತಿದೆ.
ಸಿಐಎಸ್ಎಫ್ನ ಸರ್ಕಾರಿ ಕಟ್ಟಡ ಭದ್ರತಾ (ಜಿಬಿಎಸ್) ಘಟಕದಿಂದ ಪಡೆದ ತಜ್ಞರು, ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಅಗ್ನಿ ಶಾಮಕ ಅಧಿಕಾರಿಗಳು ಮತ್ತು ಪ್ರಸ್ತುತ ಸಂಸತ್ತಿನ ಭದ್ರತಾ ತಂಡದ ಅಧಿಕಾರಿಗಳೊಂದಿಗೆ ಈ ವಾರದ ಕೊನೆಯಲ್ಲಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.
ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಸಿಐಎಸ್ಎಫ್ನ ಸಮಗ್ರ ಭದ್ರತೆ ಅಡಿಯಲ್ಲಿ ತರಲಾಗುತ್ತಿದೆ.ಇದು ಸಂಸತ್ತಿನ ಭದ್ರತಾ ಸೇವೆ, ದೆಹಲಿ ಪೊಲೀಸ್ ಮತ್ತು ಸಿಐಎಸ್ ಎಫ್ ನ ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ ನ್ನು ಒಳಗೊಂಡಿರುತ್ತದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…