BREAKING NEWS

ಮೇಲ್ಮನವಿ ಬಾಕಿಯಿದೆ ಎಂಬ ಕಾರಣಕ್ಕೆ ‘ಪೆರೋಲ್ ನಿರಾಕರಿಸುವಂತಿಲ್ಲ’: ಹೈಕೋರ್ಟ್

ಬೆಂಗಳೂರು : ಕ್ರಿಮಿನಲ್ ಕೇಸ್‍ಗಳಲ್ಲಿ ವ್ಯಕ್ತಿಯೊಬ್ಬ ಶಿಕ್ಷೆಗೆ ಗುರಿಯಾದ ಬಳಿಕ ಸಲ್ಲಿಕೆಯಾಗಿರುವ ಮೇಲ್ಮನವಿ ವಿಚಾರಣಾ ಹಂತದಲ್ಲಿದೆ ಎಂಬ ಕಾರಣಕ್ಕೆ ಪೆರೋಲ್ ಮನವಿ ತಿರಸ್ಕರಿಸುವಂತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಬೆಳಗಾವಿಯ ಅರ್ಜುನ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ. ಅಲ್ಲದೆ, ಮುಂದಿನ 15 ದಿನಗಳಲ್ಲಿ ಕಾರಾಗೃಹದ ಅಧಿಕಾರಿಗಳು ಪೆರೋಲ್ ಅರ್ಜಿಯನ್ನು ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದೆ.

ಜೊತೆಗೆ, ಈ ಆದೇಶವನ್ನು ಎಡಿಜಿಪಿ(ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ)ಗೆ ತಲುಪಿಸಬೇಕು, ಅವರು ಎಲ್ಲ ಕಾರಾಗೃಹಗಳಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರೆ, ಆಗ ಪೆರೋಲ್ ಅರ್ಜಿಯನ್ನು ಪರಿಗಣಿಸಬೇಕಾಗುತ್ತದೆ.

ಆಗಲೂ ಸಹ ಒಂದು ವೇಳೆ ಪೆರೋಲ್ ಅರ್ಜಿ ತಿರಸ್ಕಾರವಾಗಿದ್ದರೂ ಸಹ ಪೆರೋಲ್ ಅರ್ಜಿಯನ್ನು ಪರಿಶೀಲಿಸಿ ಯಾವ ಆಧಾರದಲ್ಲಿ ಮನವಿ ಸಲ್ಲಿಸಲಾಗಿದೆ ಎಂಬುದನ್ನು ಆಧರಿಸಿ ನೈಜ ಕಾರಣವಿದ್ದರೆ ಮಾತ್ರ ತಿರಸ್ಕರಿಸಬೇಕೇ ಹೊರತು ಇಲ್ಲವಾದರೆ ಅರ್ಜಿ ಪುರಸ್ಕರಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಾನೂನು ರೀತಿಯಲ್ಲಿ ಅರ್ಜಿದಾರರು ತಮಗೆ ಅಧೀನ ನ್ಯಾಯಾಲಯ ಶಿಕ್ಷೆಗೆ ಒಳಪಡಿಸಿರುವುದನ್ನು ಪ್ರಶ್ನಿಸಿದ್ದಾರೆ. ಆದರೆ ಮೇಲ್ಮನವಿ ಬಾಕಿ ಇದೆ ಎಂಬ ಕಾರಣ ನೀಡಿ ಪೆರೋಲ್ ನಿರಾಕರಿಸಲಾಗಿದೆ. ಹೀಗಾಗಿ, ನ್ಯಾಯಾಲಯ ಪೆರೋಲ್ ತಿರಸ್ಕರಿಸಿರುವ ಹಿಂಬರಹ ರದ್ದುಗೊಳಿಸಿ, ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಕಾನೂನು ಪ್ರಕಾರ ಪೆರೋಲ್ ಅರ್ಜಿ ಪರಿಗಣಿಸುವಂತೆ ನಿರ್ದೇಶನ ನೀಡಿದೆ.

ಪ್ರಕರಣವೇನು?: ಅರ್ಜಿದಾರರು 2018ರ ಎಪ್ರಿಲ್ 6ರಿಂದ ಜೈಲಿನಲ್ಲಿದ್ದಾರೆ ಮತ್ತು ಅವರು ಹಲವು ಕಾರಣಗಳನ್ನು ನೀಡಿ 2022ರ ಡಿಸೆಂಬರ್ 7ರಂದು ಪೆರೋಲ್ ಅರ್ಜಿ ಸಲ್ಲಿಸಿದ್ದರು. ಆದರೆ, ಕ್ರಿಮಿನಲ್ ಮೇಲ್ಮನವಿ ಹಾಗೂ ಜಾಮೀನು ಅರ್ಜಿ ಬಾಕಿ ಇದೆ ಎಂಬ ಕಾರಣ ನೀಡಿದ ಜೈಲಿನ ಅಧೀಕ್ಷಕರು ಪೆರೋಲ್ ಅರ್ಜಿಯನ್ನು ತಿರಸ್ಕರಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

5 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

6 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

6 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

7 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

10 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

11 hours ago