ಬೆಂಗಳೂರು : ಕ್ರಿಮಿನಲ್ ಕೇಸ್ಗಳಲ್ಲಿ ವ್ಯಕ್ತಿಯೊಬ್ಬ ಶಿಕ್ಷೆಗೆ ಗುರಿಯಾದ ಬಳಿಕ ಸಲ್ಲಿಕೆಯಾಗಿರುವ ಮೇಲ್ಮನವಿ ವಿಚಾರಣಾ ಹಂತದಲ್ಲಿದೆ ಎಂಬ ಕಾರಣಕ್ಕೆ ಪೆರೋಲ್ ಮನವಿ ತಿರಸ್ಕರಿಸುವಂತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಬೆಳಗಾವಿಯ ಅರ್ಜುನ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ. ಅಲ್ಲದೆ, ಮುಂದಿನ 15 ದಿನಗಳಲ್ಲಿ ಕಾರಾಗೃಹದ ಅಧಿಕಾರಿಗಳು ಪೆರೋಲ್ ಅರ್ಜಿಯನ್ನು ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದೆ.
ಜೊತೆಗೆ, ಈ ಆದೇಶವನ್ನು ಎಡಿಜಿಪಿ(ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ)ಗೆ ತಲುಪಿಸಬೇಕು, ಅವರು ಎಲ್ಲ ಕಾರಾಗೃಹಗಳಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರೆ, ಆಗ ಪೆರೋಲ್ ಅರ್ಜಿಯನ್ನು ಪರಿಗಣಿಸಬೇಕಾಗುತ್ತದೆ.
ಆಗಲೂ ಸಹ ಒಂದು ವೇಳೆ ಪೆರೋಲ್ ಅರ್ಜಿ ತಿರಸ್ಕಾರವಾಗಿದ್ದರೂ ಸಹ ಪೆರೋಲ್ ಅರ್ಜಿಯನ್ನು ಪರಿಶೀಲಿಸಿ ಯಾವ ಆಧಾರದಲ್ಲಿ ಮನವಿ ಸಲ್ಲಿಸಲಾಗಿದೆ ಎಂಬುದನ್ನು ಆಧರಿಸಿ ನೈಜ ಕಾರಣವಿದ್ದರೆ ಮಾತ್ರ ತಿರಸ್ಕರಿಸಬೇಕೇ ಹೊರತು ಇಲ್ಲವಾದರೆ ಅರ್ಜಿ ಪುರಸ್ಕರಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಾನೂನು ರೀತಿಯಲ್ಲಿ ಅರ್ಜಿದಾರರು ತಮಗೆ ಅಧೀನ ನ್ಯಾಯಾಲಯ ಶಿಕ್ಷೆಗೆ ಒಳಪಡಿಸಿರುವುದನ್ನು ಪ್ರಶ್ನಿಸಿದ್ದಾರೆ. ಆದರೆ ಮೇಲ್ಮನವಿ ಬಾಕಿ ಇದೆ ಎಂಬ ಕಾರಣ ನೀಡಿ ಪೆರೋಲ್ ನಿರಾಕರಿಸಲಾಗಿದೆ. ಹೀಗಾಗಿ, ನ್ಯಾಯಾಲಯ ಪೆರೋಲ್ ತಿರಸ್ಕರಿಸಿರುವ ಹಿಂಬರಹ ರದ್ದುಗೊಳಿಸಿ, ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಕಾನೂನು ಪ್ರಕಾರ ಪೆರೋಲ್ ಅರ್ಜಿ ಪರಿಗಣಿಸುವಂತೆ ನಿರ್ದೇಶನ ನೀಡಿದೆ.
ಪ್ರಕರಣವೇನು?: ಅರ್ಜಿದಾರರು 2018ರ ಎಪ್ರಿಲ್ 6ರಿಂದ ಜೈಲಿನಲ್ಲಿದ್ದಾರೆ ಮತ್ತು ಅವರು ಹಲವು ಕಾರಣಗಳನ್ನು ನೀಡಿ 2022ರ ಡಿಸೆಂಬರ್ 7ರಂದು ಪೆರೋಲ್ ಅರ್ಜಿ ಸಲ್ಲಿಸಿದ್ದರು. ಆದರೆ, ಕ್ರಿಮಿನಲ್ ಮೇಲ್ಮನವಿ ಹಾಗೂ ಜಾಮೀನು ಅರ್ಜಿ ಬಾಕಿ ಇದೆ ಎಂಬ ಕಾರಣ ನೀಡಿದ ಜೈಲಿನ ಅಧೀಕ್ಷಕರು ಪೆರೋಲ್ ಅರ್ಜಿಯನ್ನು ತಿರಸ್ಕರಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…